ಹಿರಿಯೂರು
ತಾಲ್ಲೂಕಿನ ಹುಲುಗಲಕುಂಟೆ ಬಸ್ ನಿಲ್ದಾಣದ ಬಳಿ ಬೀದರ್ ಶ್ರೀರಂಗ ಪಟ್ಟಣ ಹೆದ್ದಾರಿಯು ಹಿರಿಯೂರಿನಿಂದ ಸೀಗೆಹಟ್ಟಿ ವರೆಗೆ ಹೆದ್ದಾರಿ ರಸ್ತೆ ಡಾಂಬರೀಕರಣ ಕಿತ್ತು ಹೋಗಿದ್ದು ಗುಂಡಿಗಳು ಬಿದ್ದಿವೆ ಪ್ರತೀದಿನ ಈ ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ಸರಕು ಸಾಗಣಿಗೆ ವಾಹನಗಳು ಶಾಲಾ ವಾಹನಗಳು ಓಡಾಡುತ್ತವೆ ಈ ಕಿತ್ತು ಹೋಗಿರುವ ರಸ್ತೆ ಗುಂಡಿಗಳಲ್ಲಿ ಬಿದ್ದು ಅನೇಕ ಅಪಘಾತಗಳು ಸಂಭವಿಸುತಿವೆ
ಆದುದರಿಂದ ಇಲ್ಲಿ ಓಡಾಡುವ ಜನತೆಗೆ ತುಂಬಾ ಬೇಸರ ಉಂಟಾಗಿದ್ದು ಇದನ್ನು ಸರಿಪಡಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ ಇದೇ 24ರಂದು ಬೆಳಿಗ್ಗೆ 10 ಗಂಟೆಗೆ ಹುಲಗುಲ ಕುಂಟೆ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ರಸ್ತೆ ತಡೆದು ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಹಾಗೂ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಸದಸ್ಯರು, ತಾಲ್ಲೂಕು ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯ್ತಿ ಸದಸ್ಯರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ