ಗದಗ:
ನಿನ್ನೆಯಿಂದ ನಡೆದಯುತ್ತಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಮ್ಮ ವಾಹನದಲ್ಲೇ ಕಾಲೇಜಿಗೆ ಕಳುಹಿಸುವ ಮೂಲಕ ಗದಗ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಬಸ್ ಸಂಚಾರ ಇಲ್ಲದೇ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿಯೇ ನಿಂತು ಪರದಾಡುತ್ತಿದ್ದರು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಕಷ್ಟವನ್ನು ನೋಡಲಾಗದೇ ತಮ್ಮ ವಾಹನದಲ್ಲಿ ಅವರನ್ನು ಹತ್ತಿಸಿ ಕಳುಹಿಸಿದ್ದಾರೆ. ಈ ಮೂಲಕ ಗದಗ ಶಹರ, ಬೆಟಗೇರಿ, ಬಡಾವಣೆ ಹಾಗೂ ಗ್ರಾಮೀಣ ಪೊಲೀಸರ ಮಾನವೀಯತೆ ಮೆರೆದಿದ್ದಾರೆ. ಪೊಲೀಸರು ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








