ರಾಜ್ಯಸಭಾ ಚುನಾವಣೆಯಲ್ಲಿ ಸರ್ಧೆ : ವರಿಷ್ಠರ ನಿರ್ಧಾರವೇ ಅಂತಿಮ..!

ಬೆಂಗಳೂರು

     ರಾಜ್ಯಸಭಾ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ವಿಚಾರದ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಗುಟ್ಟು ಬಿಟ್ಟುಕೊಡಲು ನಿರಾಕರಿಸಿದ್ದಾರೆ.ಸದಾಶಿವ ನಗರದ ತಮ್ಮ ನಿವಾಸದಲ್ಲಿ ರಾಜ್ಯಸಭಾ ಚುನಾವಣೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸದೆ ನುಣುಚಿಕೊಂಡರು. ಚುನಾವಣೆ ವಿಚಾರದಲ್ಲಿ ವರಿಷ್ಠರ ನಿರ್ಧಾರವೆ ಅಂತಿಮ ಎಂದರು.

     ರಾಜ್ಯ ಸಭಾ ಚುನಾವಣೆಯ ಬಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದ ಬಗ್ಗೆ ಅಧ್ಯಕ್ಷರು, ಸಿಎಲ್‍ಪಿ ನಾಯಕರು ಹಾಗೂ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ನೋಡಿಕೊಳ್ಳುತ್ತಾರೆ. ತಮ್ಮನ್ನು ಅಭ್ಯರ್ಥಿ ಮಾಡುವ ವಿಚಾರದ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.

     ರಾಜ್ಯ ಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತಂತೆ ರಾಜ್ಯ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜಕೀಯ ವಿಚಾರಗಳಲ್ಲಿ ಏನೇನು ತೀರ್ಮಾನ ತೆಗೆದುಕೊಳ್ಳುತ್ತಾರೊ ತೆಗೆದುಕೊಳ್ಳಲಿ. ಈ ಕುರಿತು ಪ್ರತಿಕ್ರಿಯೆ ನೀಡಿದರೆ ಸರಿ ಹೋಗುವುದಿಲ್ಲ ಎಂದು ಖರ್ಗೆ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link