ಕಾರ್ಮಿಕರ ಹೋರಾಟದ ಧ್ವನಿಯಾಗಿ ಕಾರ್ಯನಿರ್ವಹಿಸುವೆ :ರಘುಮೂರ್ತಿ ಮನವಿ.

ಚಳ್ಳಕೆರೆ

    ಕಳೆದ ನೂರಾರು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಕಾರ್ಮಿಕರ ಪಾತ್ರ ಅಪಾರವಾದದ್ದು. ಕಾರ್ಮಿಕ ಸಮೂಹ ಎಲ್ಲಾ ಹಂತದಲ್ಲೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಉತ್ಪಾದನೆ ಹೆಚ್ಚಿ ಕೈಗಾರಿಕ ಕ್ಷೇತ್ರವೂ ಸಹ ಅಭಿವೃದ್ಧಿಯತ್ತ ಮುನ್ನಡೆದಿದೆ. ಇಲ್ಲಿನ ಸಮಸ್ತ ಕಾರ್ಮಿಕರ ಹೋರಾಟದ ಧ್ವನಿಯಾಗಿ ಕಾರ್ಯನಿರ್ವಹಿಸುವುದಾಗಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕಾರ್ಮಿಕ ಸಮೂಹಕ್ಕೆ ಭರವಸೆ ನೀಡಿದರು.

    ಅವರು, ಸೋಮವಾರ ಇಲ್ಲಿನ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಎಐಟಿಯುಸಿ ಸಂಘಟನೆ ನೇತೃತ್ವದ ಬೀದಿ ಬದಿ ವ್ಯಾಪಾರಿ ಫೆಡರೇಷನ್‍ನ ನೂತನ ಸದಸ್ಯರ ಸನ್ಮಾನ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ವ್ಯಾಪ್ತಿಯಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯ ಕಾರ್ಮಿಕರು ಇಲ್ಲಿ ಪ್ರತಿನಿತ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಸೆಳೆಯುವುದಾಗಿ ತಿಳಿಸಿದರು.

    ಸರ್ಕಾರದ ಸೂಚನೆಯಂತೆ ಬೀದಿಬದಿ ವ್ಯಾಪಾರಿ ಫೆಡರೇಷನ್ ನೂತನವಾಗಿ ಅಸ್ವಿತ್ವಕ್ಕೆ ಬಂದಿದ್ದು, ಬೀದಿಬದಿ ವ್ಯಾಪಾರ ಮಾಡುವವರೂ ತಮ್ಮ ಸುತ್ತಮುತ್ತಲ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಹೆಚ್ಚು ಬಂಡವಾಳವಿಲ್ಲದೆ, ಯಾವುದೇ ರಕ್ಷಣೆ ಇಲ್ಲದೆ ವ್ಯವಹಾರದಲ್ಲಿ ತೊಡಗಿರುವ ಕಾರ್ಮಿಕ ಸಮೂಹಕ್ಕೆ ಸರ್ಕಾರದ ಸೂಕ್ತವಾಗಿ ಸ್ಪಂದಿಸಬೇಕಿದೆ. ಕಾರ್ಮಿಕರು ವಸತಿ, ನಿವೇಶನ ಸೇರಿದಂತೆ ಹಲವಾರು ಮೂಲಭೂತ ಸಮಸ್ಯೆಗಳಿಂದ ವಂಚಿತರಾಗಿದ್ದಲ್ಲಿ ಕೂಡಲೇ ತಮ್ಮನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಕಳೆದ ಸುಮಾರು 12 ವರ್ಷಗಳಿಂದ ಈ ಸಂಘಟನೆಯ ಹೋರಾಟ ಹಾಗೂ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ನಿಮ್ಮೆಲ್ಲರ ಕಷ್ಟಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಗುರಿ ನನ್ನದಾಗಿದೆ ಎಂದರು.
 

    ಬೀದಿ ಬದಿ ವ್ಯಾಪಾರಿ ಫೆಡರೇಷನ್ ರಾಜ್ಯಾಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಮಾತನಾಡಿ, ಕಾರ್ಮಿಕರೂ ಸಹ ಈ ಸಮಾಜದಲ್ಲಿ ಸಮಾನತೆಯಿಂದ ಬಾಳುವ ಹಕ್ಕು ಪಡೆದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕೆಲವು ಅವೈಜ್ಞಾನಿಕ ಯೋಜನೆಗಳು ಕಾರ್ಮಿಕ ಸಮೂಹಕ್ಕೆ ತೊಂದರೆ ಉಂಟು ಮಾಡುತ್ತಿವೆ. ಕಳೆದ ನಾಲ್ಕು ದಶಕಗಳಿಂದ ಕಾರ್ಮಿಕ ಹಿತರಕ್ಷಣೆಗೆ ಎಐಟಿಯುಸಿ ಸಂಘಟನೆ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ.

     ವಿಶೇಷವೆಂದರೆ ಚಳ್ಳಕೆರೆ ನಗರದಲ್ಲಿ ಶಾಸಕ ಟಿ.ರಘುಮೂರ್ತಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡುವ ಮೂಲಕ ಕಾರ್ಮಿಕ, ಬಡ ಮಕ್ಕಳೂ ಸಹ ಸು¯ಭವಾಗಿ ಇಂಜಿನಿಯರಿಂಗ್ ಪದವಿ ಪೂರೈಸಬಹುದಾಗಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಫೆಡರೇಷನ್ ತಾಲ್ಲೂಕು ಅಧ್ಯಕ್ಷ ಸಿ.ವೈ.ಶಿವರುದ್ರಪ್ಪ, ಚಳ್ಳಕೆರೆ ನಗರ ವ್ಯಾಪ್ತಿಯಲ್ಲಿ ಒಟ್ಟು 600 ಜನ ಬೀದಿಬದಿ ವ್ಯಾಪಾರಿಗಳಿದ್ಧಾರೆ. ಕಳೆದ ಸುಮಾರು 40 ವರ್ಷಗಳಿಂದ ಇವರುಗಳು ತಮ್ಮ ನ್ಯಾಯಯುತ ಬೇಡಿಕೆಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದಾರೆ

     . ಇಂದಿನ ಸ್ಥಿತಿಯಲ್ಲಿ ಕಾರ್ಮಿಕ ಮಕ್ಕಳನ್ನು ಶಿಕ್ಷಣವಂತರನ್ನಾಗಿಸುವ ಕನಸು ದೊಡ್ಡದಾಗಿದೆ. ಆದರೆ, ಯಾವುದೇ ಆರ್ಥಿಕ ಸೌ ಲಭ್ಯವಿಲ್ಲದೆ ಸಾಧನೆ ಮಾಡಲು ಸಾಧ್ಯವಿಲ್ಲ. ಶಾಸಕ ಟಿ.ರಘುಮೂರ್ತಿ ಕಾರ್ಮಿಕ ಸಮೂಹದ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಜಿ.ವೀರೇಶ್, ನಗರಸಭಾ ಸದಸ್ಯರಾದ ರಮೇಶ್‍ಗೌಡ, ಚಳ್ಳಕೆರೆಯಪ್ಪ, ಜೈತುಂಬಿ, ಟಿ.ಮಲ್ಲಿಕಾರ್ಜುನ್, ವೈ.ಪ್ರಕಾಶ್, ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ದೊಡ್ಡಉಳ್ಳಾರ್ತಿ ಕರಿಯಣ್ಣ, ತಿಪ್ಪೇರುದ್ರಪ್ಪ, ಬಸವರಾಜು ಮುಂತಾದವರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link