ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ

ಬೆಂಗಳೂರು

    ರೈತನ ಮಗನಾಗಿ ನಾಲ್ಕು ದಶಕಗಳ ಕಾಲ ರೈತರ ಪರ ಹೋರಾಟ ಮಾಡುತ್ತಾ, ನಾಲ್ಕು ಬಾರಿ ಸಿಎಂ ಆಗಿರುವ ನಾನು ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಐತಿಹಾಸಿಕ ನಿರ್ಣಯ ಗಳಾಗಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

    ತುರ್ತು ಪ್ರತಿಕಾಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ನನ್ನ ಬೆಳೆ, ನನ್ನ ಹಕ್ಕು. ರೈತರು ಬೆಳೆದ ಬೆಳೆಯನ್ನು ಎಲ್ಲಿಬೇಕಾದರೂ ಮಾರಾಟ ಮಾಡಬಹುದು. ರೈತರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಬಂಧನಗಳಿಂದ ಮುಕ್ತ ಮಾಡಲಾಗಿದೆ . ಎಪಿಎಂಸಿ ಯಲ್ಲಿ ಮಾರಾಟ ಮಾಡುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದ ಬೆಳೆಯನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap