ಜಗಳೂರು :
ಮುಂದಿನ ದಿನಗಳಲ್ಲಿ ತಾಲೂಕನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಪ್ರಯತ್ನ ಪಡಲಾಗುವುದು ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.
ಪಟ್ಟಣದ ಗುರುಭವನದ ಆವರಣದಲ್ಲಿ ಗುರುವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದರು.
ತಾಲೂಕಿನಲ್ಲಿ ಮಳೆಗೆ ಬರವಿದ್ದರೂ ಶಿಕ್ಷಣಕ್ಕೆ ಬರವಿಲ್ಲ, ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾಗಬೇಕು. ಡಿಸೆಂಬರ್ನಲ್ಲಿ 3 ದಿನಗಳ ಕಾಲ ಥ್ರೋ ಕಬ್ಬಡ್ಡಿ ಕ್ರೀಡಾಕೂಟವನ್ನು ಆಯೋಜಿಸಲಾ ಗುವುದು, ತಾಲೂಕಿನ ಕಳೆದ ಐದು ವರ್ಷಗಳಿಂದ ಕ್ರೀಡಾಭಿಮಾನಿಗಳಿಗೆ ಹಾಗೂ ಕಲಾಭಿಮಾನಿಗಳಿಗೆ ಪ್ರೋತ್ಸಾಹ ನೀಡುವವರು ಇಲ್ಲದಂತಾಗಿದ್ದು, ಆದ್ದರಿಂದ ಡಿಸೆಂಬರ್ನಲ್ಲಿ 3 ದಿನಗಳ ಕಾಲ ಥ್ರೋ ಕಬ್ಬಡ್ಡಿ ಕ್ರೀಡಾಕೂಟ ಆಯೋಜಿಸುವ ಮೂಲಕ ಸಾಂಸ್ಕತಿಕ ಕಾರ್ಯಕ್ರಮಕ್ಕೆ ಏರ್ಪಡಿ ಸುವ ಮೂಲಕ ಪ್ರೋತ್ಸಾಹ ನೀಡಲಾಗುವುದು. ತಾಲೂಕು ಬದಲಾವಣೆಯಾಗಬೇಕಿದೆ.
ಸಿರಿಗೆರೆ ಶ್ರೀಗಳ ಸಮ್ಮುಖದಲ್ಲಿ 56 ಕೆರೆಗಳ ನೀರು ತುಂಬಿಸುವ ಯೋಜನೆ ಡಿಪಿಆರ್ ಹಂತದಲ್ಲಿದೆ. ಬರದ ನಾಡಿಗೆ ನೀರು ತರಲು ಪ್ರತಿಯೊಬ್ಬರ ಸಹಕಾರ ಅತಿ ಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ತಾಲೂಕು ಸಂಪೂರ್ಣ ನೀರಾವರಿಯಾಗಲು ಶ್ರಮಿಸಲಾಗುವುದು. ಪಟ್ಟಣದ ಬೈಪಾಸ್ ರಸ್ತೆ ಅಭಿವೃದ್ದಿ 9 ಕೋಟಿ ರೂ. ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಮುಂದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಮೊರಾರ್ಜಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ವಿದ್ಯಾರ್ಥಿಗಳನ್ನು ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಕರೆ ತರಬೇಕು ಎಂದು ಬಿಇಒ ಈಶ್ವರಚಂದ್ರ ಅವರಿಗೆ ಸೂಚಿಸಿದರು.
ಇದೇ ವೇಳೆ ಬ್ಯಾಂಡ್ಸೆಟ್ ನಡೆಸಿದ ಇಮಾಂ ಶಾಲೆ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಧನ ಸಹಾಯ ನೀಡಿದರು. ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಶಂಕರ್ನಾಯ್ಕ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಸ್.ಕೆ.ಮಂಜುನಾಥ್, ಉಮಾವೆಂಕಟೇಶ್, ಶಾಂತಕುಮಾರಿ, ತಾಲೂಕು ಪಂಚಾಯ್ತಿ ಅಧ್ಯಕ್ಷ ಮಂಜುಳಾ, ಎಪಿಎಂಸಿ ಅಧ್ಯಕ್ಷ ಹನುಮಂತಪ್ಪ, ತಾಲೂಕು ಪಂಚಾಯ್ತಿ ಸದಸ್ಯರಾದ ಸಿದ್ದೇಶ್, ಶಿಲ್ಪಾಮಂಜುನಾಥ್, ಮರೇನಹಳ್ಳಿ ಬಸವರಾಜ್, ವಕೀಲರ ಸಂಘದ ಅಧ್ಯಕ್ಷ ಹೆಚ್.ಬಸವರಾಜ್, ಪಟ್ಟಣ ಪಂಚಾಯ್ತಿ ಸದಸ್ಯರಾದ ತಿಪ್ಪೇಸ್ವಾಮಿ, ದೇವರಾಜ್, ರವಿಕು ಮಾರ್, ಪಾಪಲಿಂಗ, ರಮೇಶ್, ಮಂಜಮ್ಮ, ಲುಕ್ಮಾನ್ಖಾನ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಇ.ಸತೀಶ್, ಪ್ರಾಥಮಿಕ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ವೀರೇಶ್, ಇಒ ಜಾನಕಿರಾಮ್, ಬಿಇಒ ಈಶ್ವರಚಂದ್ರ, ಸಮಾಜ ಕಲ್ಯಾಣ ಇಲಾಖೆ ಅಶೋಕ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
