ಅಕ್ರಮ ಮಣ್ಣು ಸಾಗಣೆ: ಜೆಸಿಬಿ, ಟ್ರಾಕ್ಟರ್ ವಶ..!

ಹುಳಿಯಾರು:

    ಹುಳಿಯಾರು ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿದ್ದ ಜೆಸಿಬಿ ಹಾಗೂ 4 ಟ್ರಾಕ್ಟರ್ ಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

     ಪಟ್ಟಣದ ಅಮಾನಿಕೆರೆಯಲ್ಲಿ ಮಣ್ಣು ಅಕ್ರಮವಾಗಿ ಸಾಗಿಸುವುದು ಅವ್ಯಾಹಿತವಾಗಿ ನಡೆಯುತ್ತಿದೆ. ರೈತರ ತೋಟಗಳಿಗೆ ಸಾಗಿಸುವ ನೆಪವೊಡ್ಡಿ ಇಟ್ಟಿಗೆ ಕಾರ್ಖಾನೆಗಳಿಗೆ ಸಾಗಿಸುವುದು ನಡೆಯುತ್ತಿದೆ. ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

      ಈ ವೇಳೆ ಮಣ್ಣು ತುಂಬುತ್ತಿದ್ದ ಜೆಸಿಬಿ ಮತ್ತು 4 ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿ ದೀಪಾ ಸೇರಿದಂತೆ ಇತರ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು. ರೈತರಾದ ಎಂಜಿನಿಯರ್ ಲಿಂಗರಾಜು, ರೈತಸಂಘದ ಹೊಸಹಳ್ಳಿ ಚಂದ್ರಣ್ಣ, ದುರ್ಗರಾಜು, ನರಸಪ್ಪ ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap