ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ: ಪರಮೇಶ್ವರ್

ಬೆಂಗಳೂರು

          ರಾಜ್ಯ, ಜಿಲ್ಲಾವಾರು ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಗಳನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಎಲ್ಲ ಜಿಲ್ಲೆಯಲ್ಲೂ ಮೂಲಸೌಕರ್ಯ, ಸಿಂಥೆಟಿಕ್ ಟ್ರ್ಯಾಕ್ ಹಾಗೂ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದರು.

          ಇತ್ತೀಚೆಗೆ ಮುಕ್ತಾಯವಾಗಿದ್ದ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತ ಖ್ಯಾತ ಅಂತಾರಾಷ್ಟ್ರೀಯ ಟೆನಿಸ್ ಆಟಗಾರ ರೋಹಣ್ ಬೋಪಣ್ಣ ಮತ್ತು ಕುಸ್ತಿ ಮಾದರಿಯ ಕುರಾಶ್ ವಿಭಾಗದಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದ ಬೆಳಗಾವಿಯ ಮಲಪ್ರಭಾ ಜಾದವ್ ಅವರನ್ನು ಉಪ ಮುಖ್ಯಮಂತ್ರಿ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್ ಸದಾಶಿವನಗರದ ತಮ್ಮ ಕಚೇರಿಯಲ್ಲಿಂದು ಸನ್ಮಾನಿಸಿದರು.

          ಬಳಿಕ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದವರಿಗೆ ನಗದು ಬಹುಮಾನವನ್ನು ಕ್ರೀಡಾ ಇಲಾಖೆಯಿಂದ ನೀಡಲಾಗುತ್ತಿದೆ. ರೋಹನ್ ಬೋಪಣ್ಣ ಅವರಿಗೆ 25 ಲಕ್ಷ ರೂ. ಹಾಗೂ ಮಲಪ್ರಭ ಜಾದವ್ ಅವರಿಗೆ 8 ಲಕ್ಷ ರೂ. ಚೆಕ್ ವಿತರಿಸಲಾಗಿದೆ ಎಂದು ಹೇಳಿದರು.

         ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಗ್ರ್ಯಾಂಡ್ ಮಾಸ್ಟರ್ ಚೆಸ್‍ನಲ್ಲಿ ಮೊದಲ ಸ್ಥಾನ ಪಡೆದ ತೇಜ್ ಕುಮಾರ್ ಹಾಗೂ ಸ್ಟ್ಯಾನಿ ಜಿ.ಎ. ಅವರಿಗೆ ತಲಾ 10 ಲಕ್ಷ ರೂ. ನೀಡಲಾಗಿದೆ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link