ಮಹಾರಾಷ್ಟ್ರದಲ್ಲಿ ಭಾರಿ ಮಳೆ :ನದಿಗಳಿಗೆ ಒಳ ಹರಿವು ಹೆಚ್ಚಳ

ಚಿಕ್ಕೋಡಿ:

     ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಹಾಗೂ ಕೊಲ್ಲಾಪೂರ ಜಿಲ್ಲೆಯ ವಿವಿಧ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಪರಿಣಾಮ ಕೃಷ್ಣಾ, ವೇದಗಂಗಾ, ದೂದ್‌ಗಂಗಾ ಹಾಗು ಪಂಚಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ.

ನದಿಗಳ ನೀರಿನ ಒಳಹರಿವು ಹೆಚ್ಚಳ
      ಚಿಕ್ಕೋಡಿ ಉಪವಿಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಚಿಕ್ಕೋಡಿ ತಾಲೂಕಿನ ನದಿಗಳಿಗೆ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಬ್ಯಾರೇಜ್‌ಗೆ 56,000 ಕ್ಯೂಸೆಕ್​​ ನೀರು ಹರಿದು ಬರುತ್ತಿದ್ದು, ಬರುವ ನೀರಿನಷ್ಟೇ ಅವುಗಳನ್ನು ಹಿಪ್ಪರಗಿ ಬ್ಯಾರೇಜ್‌ನಿಂದ ಹೊರಗಡೆ ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap