ಆಪರೇಷನ್‌ ಕಮಲ ಪ್ರಕರಣದ ತನಿಖೆಯೂ ನಡೆಯಲಿ: ಖರ್ಗೆ

ಬೆಂಗಳೂರು

    ಕುಮಾರಸ್ವಾಮಿ ಸರಕಾರದಲ್ಲಿ ನಡೆಸಲಾಗಿದೆ ಎಂಬ ಫೋನ್‌ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಿರುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ಇದರ ಜೊತೆಗೆ ಆಪರೇಷನ್‌ ಕಮಲ ಪ್ರಕರಣವನ್ನೂ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

    ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆ ನಡೆಸಬೇಕೆಂದು ನಾನು ಈ ಮೊದಲೂ ಹೇಳಿದ್ದೆ. ಸಿಬಿಐ ತನಿಖೆ ನಡೆಸಿದರೆ ಉತ್ತಮ. ಆದರೆ ತನಿಖೆ ಏಕಮುಖವಾಗಿ ನಡೆಯಬಾರದು. ನಿಷ್ಪಕ್ಷವಾದ ತನಿಖೆ ನಡೆಯುತ್ತದೆ ಎಂಬ ನಂಬಿಕೆ ಇದೆ ಎಂದು ಅಭಿಪ್ರಾಯಪಟ್ಟರು.ನಿಷ್ಟಕ್ಷಪಾತ ತನಿಖೆ ನಡೆಯುವ ವಿಶ್ವಾಸವಿದೆ. ಇದರ ಜೊತೆಗೆ ಬಿಜೆಪಿಯವರು ಅಧಿಕಾರ ಹಿಡಿಯಲು ಯಾರಿಗೆಲ್ಲಾ ಆಮಿಷ ಒಡ್ಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆಯಾಗಲಿ ಎಂದು ಆಗ್ರಹಿಸಿದರು.

.   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap