ಬೆಂಗಳೂರು
ನಗರದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಐಜಿಪಿ ಹರಿಶೇಖರನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯ ಕೇಂದ್ರ ಸ್ಥಾನದಲ್ಲಿ ಐಜಿಪಿಯಾಗಿದ್ದ ಹರಿಶೇಖರ್ ಅವರನ್ನು ನಗರದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು ಈ ಹುದ್ದೆಯಲ್ಲಿದ್ದ ಹಿತೇಂದ್ರ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಅಣ್ಣಾಮಲೈ ಅವರನ್ನು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿದ್ದು ಇಲ್ಲಿದ್ದ ಡಾ.ಶರಣಪ್ಪ ಅವರಿಗೆ ಹುದ್ದೆ ಕಾಯ್ದಿರಿಸಲಾಗಿದೆ,ಪೂರ್ವ ವಿಭಾಗದ ಡಿಸಿಪಿಯಾಗಿ ರಾಹುಲ್ ಕುಮಾರ್, ಚಿಕ್ಕಮಗಳೂರು ಎಸ್ಪಿಯಾಗಿ ಸಿಐಡಿಯಲ್ಲಿದ್ದ ಹರೀಶ್ ಪಾಂಡೆ ಅವರನ್ನು ವರ್ಗಾವಣೆ ಮಾಡಲಾಗಿದೆ.ಕೆಎಸ್ಆರ್ಪಿ ಎಸ್ಪಿಯಾಗಿ ಅಜಯ್ ಹಿಲೋರಿ,ಚನ್ನಪಟ್ಟಣದ ಲೀಸ್ ತರಬೇತಿ ಶಾಲೆಯ ಎಸ್ಪಿಯಾಗಿ ಜಿನೇಂದ್ರ ಖಣಗಾವಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/fff2457eb33b091cc12c65724f3baf70.gif)