ವಿಶ್ವ ಮೆಚ್ಚಿದ ನರೇಂದ್ರ ಮೋದಿ ಆಡಳಿತ : ಡಾ ಬಿ.ಮಹಂತೇಶ್ ಪ್ರಶಂಸೆ

ಹಿರಿಯೂರು :

       ಭಾರತದಲ್ಲಿನ ಪ್ರಧಾನಿ ನರೇಂದ್ರಮೋದಿಯವರ ಸ್ವಚ್ಚ ಕಳಂಕರಹಿತ ಆಡಳಿತ ಕಂಡು ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ನಿಸ್ವಾರ್ಥ ಮತ್ತು ಅಪ್ರತಿಮ ದೇಶಪ್ರೇಮಿ, ಜನಪರ ಆಡಳಿತಗಾರ ನಮ್ಮ ದೇಶಕ್ಕೆ ಬೇಕಾಗಿದೆ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೃಷಿ ವಿಜ್ಞಾನಿ ಡಾ||ಬಿ.ಮಹಂತೇಶ್ ಪ್ರಶಂಸಿದರು.

      ತಾಲ್ಲೂಕಿನ ಮ್ಯಾಕ್ಲೂರಹಳ್ಳಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ “ಜನಜಾಗೃತಿ ಪಾದಯಾತ್ರೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

       ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರ ಪರವಾಗಿ ಮತ ಯಾಚಿಸಿ ಮಾತನಾಡಿದ ಅವರು ದೇಶಕ್ಕಾಗಿ ಸಮರ್ಪಣಾ ಭಾವದಿಂದ ಹಗಲಿರುಳು ದೇಶಸೇವೆ ಮಾಡುತ್ತಿರುವ ನಿಸ್ವಾರ್ಥ ಕರ್ಮಯೋಗಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮುಂದುವರೆಸಬೇಕಾದರೆ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರನ್ನು ಈ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂಬುದಾಗಿ ಕರೆ ನೀಡಿದರು.

        ಬಬ್ಬೂರು ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯದ ಮತ್ತು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹಾಗೂ ಜನಪರ ಹಾಗೂ ರೈತಪರ ಯೋಜನೆಗಳನ್ನು ಮುಂಬರುವ ಅಧಿಕಾರವಧಿಯಲ್ಲಿ ರೂಪಿಸಲಿರುವ ಭಾರತೀಯ ಜನತಾ ಪಾರ್ಟಿಯ “ಕಮಲ”ದ ಗುರುತಿಗೆ ತಮ್ಮ ಅಮೂಲ್ಯವಾದ ಮತಗಳನ್ನು ನೀಡುವುದರ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ನಾರಾಯಣಸ್ವಾಮಿಯವರನ್ನು ಜಯಗಳಿಸುವಂತೆ ಮಾಡಿ ಮತ್ತೊಮ್ಮೆ ನರೇಂದ್ರಮೋದಿಯವರು ದೇಶದ ಪ್ರಧಾನಿಯಾಗಿ ಮುಂದುವರೆಯಲು ಅವಕಾಶ ನೀಡಬೇಕೆಂದು ಮತದಾರರಿಗೆ ಮನವಿ ಮಾಡಿದರು.

        ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತ ರಂಗಸ್ವಾಮಿ, ಎನ್.ಮಹಲಿಂಗಪ್ಪ, ವೈ.ಈರಣ್ಣ, ಪೂಜಾರಿ ನಾಗಪ್ಪ, ಬಬ್ಬೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಈರಾಬೋವಿ, ಸಿ.ಕರಿಯಪ್ಪ, ಮಂಜುನಾಥ, ರೈತ ಮುಖಂಡ ರಾಜಣ್ಣ, ಪಾಂಡು, ರಾಮಚಂದ್ರಪ್ಪ, ಆರ್.ಪ್ರಭಾಕರ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap