ಜನಸ್ಪಂದನ ಕಾರ್ಯಕ್ರಮ

ಹಿರೇಕೆರೂರ :

         ತಾಲೂಕು ಆಡಳಿತ ಹಿರೇಕೆರೂರ ಇವರ ಸಂಯುಕ್ತ ಆಶ್ರಯದಲ್ಲಿ ಶಾಸಕರಾದ ಬಿಸಿ ಪಾಟೀಲ ಇವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನೆರವೇರಿತು.

           ಈ ಸಂದರ್ಭದಲ್ಲಿ ಮಂಜೂರಾದ ವಿಧವಾ ವೇತನದ ಆದೇಶ ಕಾಫಿ, ಮತ್ತು ಕೋಡ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂಪಾಯಿಗಳ ಚೆಕ್ ನ್ನು ವಿತರಿಸಿದರು. ಹಾಗೂ ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

          ಈ ಕಾರ್ಯಕ್ರಮದಲ್ಲಿ ಶಾಸಕ ಬಿಸಿ ಪಾಟೀಲ, ತಾಲೂಕು ಪಂಚಾಯತ್ ಅಧ್ಯಕ್ಷರು ಚಿಕ್ಕೇರೂರು ಗ್ರಾಮ ಪಂಚಾಯತ ಪದಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯತ್ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಊರ ನಾಗರಿಕರು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link