ತುಮಕೂರು:
ತುಮಕೂರು ತಾಲ್ಲೂಕು ಕಚೇರಿ ಆವರಣದಲ್ಲಿರುವ ಗ್ರಾಮಾಂತರ ಶಾಸಕರ ಕಚೇರಿಯಲ್ಲಿ ಅಕ್ಟೋಬರ್ 15ರಂದು (ಸೋಮವಾರ) ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ರವರ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರಲಿದ್ದು ಗ್ರಾಮಾಂತರ ಕ್ಷೇತ್ರದ ಜನತೆ ಹಾಗೂ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಶಾಸಕರು ಮತ್ತು ಅಧಿಕಾರಿಗಳ ಬಳಿ ನಿವೇದಿಸಿ ಕೊಳ್ಳಬಹುದಾಗಿದ್ದು ಕ್ಷೇತ್ರದ ಜನತೆಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕರ ಕಛೇರಿ ಪ್ರಕಟಣೆಯಲ್ಲಿ ಕೋರಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
