ಡಿಕೆಶಿ ವಿರುದ್ಧ ಗುಡುಗಿದ ಜಾರಕಿಹೋಳಿ

ಬಳ್ಳಾರಿ: 

      ಸಚಿವ ಡಿ.ಕೆ.ಶಿವಕುಮಾರ್​​ಗೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಬಗ್ಗೆ ಅಕ್ಷೇಪ ಇದ್ರೇ ಕ್ಯಾಬಿನೆಟ್ ಚರ್ಚೆ ವೇಳೆ ಹೇಳಬೇಕಿತ್ತು. ಈ ರೀತಿ ಬಹಿರಂಗ ಕ್ಷಮೆ ಕೇಳುವ ಅಗತ್ಯವೇನಿತ್ತು ಎಂದು ಸಚಿವ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಜಿಲ್ಲೆಯ ಕೂಡ್ಲಿಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಶಿವಕುಮಾರ್ ಶೋ ಮಾಡೋದು ಬಿಟ್ಟು ಕೆಲಸ ಮಾಡಿದ್ರೆ, ಒಳಿತು.

       ಅವರ ಹಿಂಬಾಲಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಎಲ್ಲಿಗೆ ಹೋಗಿದ್ದರು. ಎಲ್ಲ ಸಭೆಗಳಲ್ಲಿ ಮಾತನಾಡುತ್ತಿದ್ರೂ ಅದನ್ನು ಏಕೆ ತಡೆಯಲಿಲ್ಲ? ಕ್ಯಾಬಿನೆಟ್​ನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಮತ್ತು ಎಸ್.ಎಸ್. ಮಲ್ಲಿಕಾರ್ಜುನ ಮಾತ್ರ ಪರ-ವಿರೋಧ ಚರ್ಚೆ ಮಾಡಿದ್ರು. ಪ್ರತ್ಯೇಕ ಧರ್ಮ ಬೇಕು ಎಂದು ಹೇಳಿದ್ದನ್ನು ಪರಿಗಣಿಸಿದ್ದೇವೆ ಅಷ್ಟೇ ಎಂದು ಸಚಿವ ಶಿವಕುಮಾರ್​ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದರು.

       ಮಾಜಿ ಸಚಿವ ಎಂ.ಬಿ.ಪಾಟೀಲ್​ಗೆ ನಮ್ಮ ಬೆಂಬಲವಿದೆ. ಲೋಕಸಭಾ ಉಪ ಚುನಾವಣೆಯಲ್ಲಿ ನನಗೆ ಕೂಡ್ಲಿಗಿ ಜವಾಬ್ದಾರಿ ಕೊಟ್ಟಿದ್ದಾರೆ ಅದನ್ನು ‌ನಿಭಾಯಿಸುತ್ತೇನೆ. ಹೊಸಪೇಟೆಯಲ್ಲಿ ಇಂದು ನಡೆಯುವ ಸಭೆ ಮಾಹಿತಿ ಇರಲಿಲ್ಲ. ಹಾಗಾಗಿ ನಾನು ಅದಕ್ಕೆ ‌ಹೋಗಲಿಲ್ಲ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link