ಚಳ್ಳಕೆರೆ
ರಾಜ್ಯದಲ್ಲಿ ನಂಜುಡಪ್ಪ ವರದಿ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಯ ಆರೂ ತಾಲೂಕುಗಳು ಅತಿ ಹಿಂದುಳಿದ ಪ್ರದೇಶಗಳಾಗಿದ್ದು, ಈಗ ಅಭಿವೃದ್ಧಿಗೆ ಅಧಿಕಾರಿ ವರ್ಗ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕುಡಿಯುವ ನೀರು, ಉದ್ಯೋಗ ಖಾತರಿ ಯೋಜನೆ, ಶೌಚಾಲಯ ನಿರ್ಮಾಣದಂತಹ ಮೂಲಭೂತ ಸಮಸ್ಯೆಗೆ ಸಕರಾತ್ಮಕವಾಗಿ ಸ್ಪಂದಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ ತಿಳಿಸಿದರು.
ಅವರು, ಸೋಮವಾರ ಬೆಳಗ್ಗೆ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕುಡಿಯುವ ನೀರು ಇಲಾಖೆ ಇಂಜಿನಿಂiÀiರ್ಗಳ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬೇಸಿಗೆ ಹಿನ್ನೆಲೆಯಲ್ಲಿ ಯಾವ ಗ್ರಾಮದಲ್ಲೂ ಸಹ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಜಾಗ್ರತೆ ವಹಿಸುವುದು ಎಲ್ಲರ ಕರ್ತವ್ಯವಾಗಿದೆ.
ಗ್ರಾಮೀಣ ಮಟ್ಟದಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದಲ್ಲಿ ನಿಮಗೂ ಮತ್ತು ಇಲಾಖೆಗೂ ಗೌರವಬರುತ್ತದೆ. ಸರ್ಕಾರದ ಕೆಲಸವನ್ನು ಯಾರೂ ಹೆಚ್ಚು ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಾರೋ ಅಂತಹ ಅಧಿಕಾರಿ ಎಲ್ಲಾ ರೀತಿಯ ಪ್ರಶಂಸೆಗೆ ಪಾತ್ರನಾಗುತ್ತಾನೆ. ನೀವೆಲ್ಲರು ಗ್ರಾಮೀಣ ಸಮಸ್ಯೆಗಳ ಸ್ಪಂದನೆಗೆ ಮೊದಲು ಆದ್ಯತೆ ನೀಡಬೇಕು.
ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಭಿವೃದ್ಧಿ ಅಧಿಕಾರಿ ಮಾತ್ರ ಇಲಾಖೆ ಗೌರವ ಮತ್ತು ಮೌಲ್ಯವನ್ನು ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಬೇದಭಾವವಿಲ್ಲದೆ ನಾವೆಲ್ಲರು ಇಲಾಖೆಯಲ್ಲಿ ಜನಸೇವಕರಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಸ್ಪಷ್ಟವಾಗಿ ತಿಳಿಸಿದರು.
ಈಗಾಗಲೇ ಕ್ಷೇತ್ರದ 28 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಟ್ಯಾಂಕರ್ಗಳಲ್ಲಿ ನೀರು ಸರಬರಾಜು ಮಾಡುತ್ತಿದ್ದು, ಎಲ್ಲಾ ದಾಖಲಾತಿಗಳು ಸ್ಪಷ್ಟತೆಯಿಂದ ಕೂಡಿಸಬೇಕು. ಸುಳ್ಳು ಪೊಳ್ಳು ದಾಖಲಾತಿಗಳನ್ನು ನಾನು ನಂಬುವುದಿಲ್ಲ. ಜನತೆಗೆ ನೀಡುವ ಕುಡಿಯುವ ನೀರಿನ ಟ್ಯಾಂಕರ್ ನೀರಿನ ಗುಣಮಟ್ಟವನ್ನು ಲ್ಯಾಬ್ಗೆ ಕಳುಹಿಸಿ ಪರಿಶೀಲಿಸಬೇಕು. ಪ್ರತಿತಿಂಗಳೂ ಈ ಕಾರ್ಯ ಮುಂದುವರೆಯಬೇಕು. ಉದ್ಯೋಗ ಖಾತರಿ ಯೋಜನೆಯಡಿ ಪ್ರತಿಯೊಬ್ಬ ಕೂಲಿಕಾರನಿಗೆ ಸರ್ಕಾರದಿಂದ ನೀಡುವ ಕೂಲಿಯನ್ನು ನೇರವಾಗಿ ಅವರ ಖಾತೆಗೆ ತಪ್ಪದೆ ನೀಡಬೇಕೆಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಎಲ್.ಈಶ್ವರಪ್ರಸಾದ್, ಕುಡಿಯುವ ನೀರು ಸರಬರಾಜು ಇಲಾಖೆ ಎಲ್ಲಾ ಇಂಜಿನಿಯರ್ಗಳು, ಕ್ಷೇತ್ರದ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
