ಜಲಶಕ್ತಿ ಅಭಿಯಾನ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಭೇಟಿ.

ಚಳ್ಳಕೆರೆ

     ಜಿಲ್ಲೆಯಾದ್ಯಂತ ಜಲಶಕ್ತಿ ಅಭಿಯಾನ ಅನುಷ್ಠಾನ ಹಾಗೂ 2018ರ ನಡೆತೋಪು ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲಾ ನೋಡಲ್ ಅಧಿಕಾರಿ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಗುರುವಾರ ಮಧ್ಯಾಹ್ನ ಚಳ್ಳಕೆರೆಗ ಆಗಮಿಸಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

     ಜಲಶಕ್ತಿ ಅಭಿಯಾನ ಅನುಷ್ಠಾನ ಜಿಲ್ಲಾ ನೋಡಲ್ ಅಧಿಕಾರಿ ರವಿಶಂಕರ್‍ಪ್ರಸಾದ್ ನೇತೃತ್ವದ ತಂಡ ನಗರದ ಆದರ್ಶ ಪ್ರೌಢಶಾಲೆ ಹಾಗೂ ಚಿತ್ರದುರ್ಗ ರಸ್ತೆಯಲ್ಲಿರುವ ಅರಣ್ಯ ಇಲಾಖೆ ಕಚೇರಿ ಹಾಗೂ ಅಲ್ಲಿನ ಸಸ್ಯ ಕ್ಷೇತ್ರಗಳ ಬೆಳವಣಿಗೆಯ ಬಗ್ಗೆ ಪರಿಶೀಲನೆ ನಡೆಸಿತು. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಸಿಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೆಚ್ಚು ಗಮನಹರಿಸುವಂತೆ ಅಧಿಕಾರಿಗಳ ತಂಡ ಸೂಚಿಸಿತು.

     ಇಲ್ಲಿನ ಪಾವಗಡ ರಸ್ತೆಯ ಆದರ್ಶ ಪ್ರೌಢಶಾಲೆಯ ಮುಂಭಾಗದ ವಿಶಾಲವಾದ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿದ ಬಗ್ಗೆ ತಂಡ ಪರಿಶೀಲನೆ ನಡೆಸಿತು. ಇನ್ನೂ ಈ ಪ್ರದೇಶದಲ್ಲಿ ಗಿಡಗಳನ್ನು ನೆಡಲು ಸೂಕ್ತ ಜಾಗವಿದ್ದು, ಮತ್ತಷ್ಟು ಗಿಡಗಳನ್ನು ನೆಡುವಂತ ಶಾಲಾ ಮುಖ್ಯಸ್ಥರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ರವಿಶಂಕರ್‍ಪ್ರದಾಸ್ ಸಸ್ಯಗಳ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ನಿತ್ಯ ಬೋಧನೆಯ ಜೊತೆಗೆ ಪರಿಸರ ಜಾಗೃತಿಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ತಿಳಿಸಿದರು.

       ಜಿಲ್ಲಾಧಿಕಾರಿ ವಿನೋತ್‍ಪ್ರಿಯಾ ಮಾತನಾಡಿ, ಜಲಶಕ್ತಿ ಅಭಿಯಾನ ಅನುಷ್ಠಾನ ಕುರಿತು ತಾಲೂಕಿನ ವಿವಿಧೆಡೆ ಪ್ರವಾಸ ಕೈಗೊಂಡಿದ್ದು, ಸಣ್ಣ ಪುಟ್ಟ ಲೋಪದೋಷಗಳ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮ ಯಶಸ್ಸಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರವನ್ನು ಕೋರುವುದಾಗಿ ತಿಳಿಸಿದರು.

       ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಆದರ್ಶ ಶಾಲೆಯ ಸುತ್ತಲು ಒಳ್ಳೆಯ ಮೈದಾನವಿದ್ದು, ಕಾಂಪೌಂಡ್ ಗೋಡೆ ನಿರ್ಮಿಸಿ ಕೊಡುವ ಯೋಜನೆ ಇದ್ದು, ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಕಳುಹಿಸಿಕೊಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಮ್ಮ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಂಗನಾಥಸ್ವಾಮಿ, ಹಿರಿಯೂರು ಉಪವಿಭಾಗದ ಅರಣ್ಯಾಧಿಕಾರಿ ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link