ದಾವಣಗೆರೆ :
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದರ ಜೊತೆ, ಜೊತೆಗೆ ಜೀವನ ಮೌಲ್ಯವನ್ನು ಸಹ ಕಲಿಯಬೇಕೆಂದು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಗ್ ಮತ್ತು ಟೆಕ್ನಾಲಜಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸಿ.ನಟರಾಜ ಕರೆ ನೀಡಿದರು.
ನಗರದ ಎ.ವಿ.ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ 2018-19 ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಪಠ್ಯದ ಜ್ಞಾನ ಕಲಿತರೆ ಸಾಲದು, ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರ ಜೊತೆಗೆ ಜೀವನ ಮೌಲ್ಯವನ್ನು ಕಲಿಯಬೇಕಾಗಿದೆ. ವಿದ್ಯಾರ್ಥಿಗಳು ಕೇವಲ ಕೊಠಡಿಯಲ್ಲಿ ಅಧ್ಯಾಪಕರು ಹೇಳಿಕೊಡುವ ಜ್ಞಾನಕ್ಕೆ ಮಾತ್ರ ಸೀಮಿತರಾಗದೇ, ಕ್ರೀಡೆ, ಸಂಸ್ಕøತಿಕ ಚಟುವಟಿಕಗಳಲ್ಲೂ ಭಾಗವಹಿಸಬೇಕು.ಆಗ ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗಲಿದೆ ಎಂದರು.
ಜ್ಞಾನ, ಕೌಶ್ಯಲ್ಯಗಳನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಸಮಾಜ ಮುಖಿಯಾಗಿ ಚಿಂತಿಸುವ ಪ್ರವೃತ್ತಿಯನ್ನು ಸಹ ರೂಢಿಸಿಕೊಳ್ಳಬೇಕು. ಸಮಾಜದಲ್ಲಿ ಯಾವುದೆ ಸವಾಲಿನ ಸಮಸ್ಯೆಗಳು ಕಂಡು ಬಂದಾಗ, ಅದರ ಪರಿಹಾರಕ್ಕೂ ಪ್ರಯತ್ನಿಸಬೇಕೆಂದು ಕರೆ ನೀಡಿದರು.
ಪ್ರತಿಭೆ ಪ್ರತಿಯೊಬ್ಬರಲ್ಲೂ ಇದ್ದು ಅದಕ್ಕೆ ಸೂಕ್ತ ಅವಕಾಶ ಮತ್ತು ಸಲಹೆ ಇಲ್ಲದೆ, ಅನಾವರಣಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಉಪನ್ಯಾಸಕರು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ, ಆ ಪ್ರತಿಭೆಯನ್ನು ಹೊರ ತರಲು ಅಗತ್ಯ ಪ್ರೋತ್ಸಾಹ ನೀಡಬೇಕೆಂದು ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ವಿವಿ ಹಾಗೂ ಕಾಲೇಜು ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ| ಸಿ.ಎಚ್.ಮುರಿಗೇಂದ್ರಪ್ಪ ಮಾತನಾಡಿ, ಕಾಲೇಜು ಹಂತ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟವಾಗಿದೆ. ಹೆಣ್ಣುಮಕ್ಕಳು ಯಾವುದೇ ಕಷ್ಟ ಬಂದರು ಸಹ ಹೆದರದೆ, ಧೈರ್ಯದಿಂದ ಇರಬೇಕು. ಇದಕ್ಕಾಗಿ ಉತ್ತಮ ಶಿಕ್ಷಣ ಪಡೆದು ನಾಯಕತ್ವದ ಗುಣಗಳನ್ನ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಸಮಯಕ್ಕೆ ಸರಿಯಾಗಿ ಓದಿ ಉತ್ತಮ ಅಂಕಗಳಿಸಿ, ಕಾಲೇಜಿಗೆ ಮತ್ತು ತಂದೆ-ತಾಯಿಗೆ ಕೀರ್ತಿ ತರಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಎ.ವಿ.ಕಮಲಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ ಪಿ.ಎಸ್.ಶಿವಪ್ರಕಾಶ್, ಜೆ.ಶಿವಪ್ಪ, ಸಂಗೀತ ನಾಯಕ್, ಪಾಲಾಕ್ಷಪ್ಪ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
