ಪತ್ರಕರ್ತರ ನ್ನು ಕೇಂದ್ರಸರ್ಕಾರದ ವಿಮಾ ಯೋಜನೆ ವ್ಯಾಪ್ತಿ ಗೆ ಸೇರಿಸಲು ಶಿಫಾರಸ್ಸು : ಡಿಸಿಎಂ

ಬೆಂಗಳೂರು :

     ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರ
ಮನವಿಗೆ ಸ್ಪಂದಿಸಿದ ಸಿಎಂ, ಡಿಸಿಎಂ, ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳಿಗೂ ಕೂಡಲೇ ಜಾಹೀರಾತು ಬಿಡುಗಡೆ ಮಾಡುವಂತೆ ವಾರ್ತಾ ಇಲಾಖೆಗೆ ಸೂಚಿಸಿದ್ದಾರೆ.

     ಕೆಯುಡಬ್ಲ್ಯೂಜೆ ಮನವಿ ಬಗ್ಗೆ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಗಮನ ಸೆಳೆದ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಅವರು, ಪತ್ರಿಕೆಗಳನ್ನು ನಡೆಸುವುದು ಕಷ್ಟವಿದೆ. ಈ ಕಷ್ಟದ ಹೊತ್ತಿನಲ್ಲಿ ಕರೊನಾ ಜಾಗೃತಿ ಸೇರಿದಂತೆ ಸರ್ಕಾರದ ಜಾಹೀರಾತು ಕೊಡುವಂತೆ ಆದೇಶಿಸಿದರು.

      ಸ್ಥಳದಲ್ಲಿಯೇ ಇದ್ದ ವಾರ್ತಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ವಾರ್ತಾ ಇಲಾಖೆಯ ಕಮಿಷನರ್ ಸಿದ್ದರಾಮಪ್ಪ ಅವರಿಗೆ ಜಾಹೀರಾತು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

      ಪತ್ರಕರ್ತರ ನ್ನು ಕೇಂದ್ರಸರ್ಕಾರದ ವಿಮಾ ಯೋಜನೆ ವ್ಯಾಪ್ತಿ ಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸಂಘ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ದ ಉಪಮುಖ್ಯಮಂತ್ರಿ ಡಾ‌ಅಶ್ವಥ್ ನಾರಾಯಣ ಅವರು ರಾಜ್ಯ ಸರ್ಕಾರದಿಂದಲೂ ಈ ಬಗ್ಗೆ ಶಿಫಾರಸ್ಸು ಮಾಡುವ ಭರವಸೆಯನ್ನು ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap