ಮಿಡಿಗೇಶಿ
ಇಲ್ಲಿಗೆ ಸಮೀಪದ ಬೇಡತ್ತೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಆಂಧ್ರ ಮತ್ತು ಒರಿಸ್ಸಾದ ರಾಜ್ಯದ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತ ಆಶ್ರಯ ನೀಡಿದೆ. ೯೫ ಕಾರ್ಮಿಕರಿಗೆ ಇಲ್ಲಿ ಊಟ, ವಸತಿ ಒದಗಿಸಲಾಗಿದೆ.
ವಸತಿ ಶಾಲೆಗೆ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಹಂಚಾಟೆ ಸಂಜೀವ್ಕುಮಾರ್ ಅವರು ಭಾನುವಾರ ಭೇಟಿ ನೀಡಿ ಕೂಲಿ ಕಾರ್ಮಿಕರ ಯೋಗ ಕ್ಷೇಮ ಹಾಗೂ ಆರೋಗ್ಯ ವಿಚಾರಿಸಿದರು.ಈ ವೇಳೆ ಮಾತನಾಡಿದ ನ್ಯಾಯಾಧೀಶರು, ಕೊರೊನಾ ವೈರಸ್ ತಡೆಗಟ್ಟಲು ಪ್ರಪಂಚದಾದ್ಯಂತ ಹಲವು ಕಾನೂನು ಜಾರಿಗೆ ತಂದಿದ್ದು, ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಬೇಕು ಎಂದು ಹೇಳಿದರು.
ಕೊರೊನಾ ವೈರಸ್ ಹರಡದಂತೆ ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಲಾಕ್ಡೌನ್ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ ಸರ್ಕಾರ ಮೂಲ ಸೌಕರ್ಯ ಒದಗಿಸುತ್ತದೆ ಎಂದರು.ನ್ಯಾಯಾಧೀಶರಾದ ಪಲ್ಲವಿ, ಮುಲ್ಲಾಸಾಬ್, ಕಾವ್ಯಶ್ರೀ, ಉಪವಿಭಾಗಾಧಿಕಾರಿ ಡಾ. ನಂದಿನಿದೇವಿ, ಟಿಹೆಚ್ಓ ಡಾ. ರಮೇಶ್ಬಾಬು, ಮಧುಗಿರಿ ವಕೀಲರ ಸಂಘದ ಉಪಾಧ್ಯಕ್ಷ ಎಂ. ಮಹೇಶ್, ವಸತಿ ಶಾಲೆ ಪ್ರಾಚಾರ್ಯ ರಾಜು ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
