ಕಲಬುರಗಿ:
ಬೇರೆ ರಾಜ್ಯದಲ್ಲಿರುವ ಕೆಲವು ಶಾಲೆಗಳಲ್ಲಿ ಕನ್ನಡವನ್ನು ಭೋಧಿಸುವಾಗ ನಮ್ಮ ರಾಜ್ಯದಲ್ಲಿರುವ ಕೇಂದ್ರೀಯ ವಿದ್ಯಾಲಯಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧನೆ ಮಾಡುವುದು ಕಡ್ಡಾಯವಾಗಿದೆ. ಇದನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳ ಮಾನ್ಯತೆ ರದ್ದುಪಡಿಸಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ನಾನಾ ಇಲಾಖೆಯ ಅಧಿಕಾರಿಗಳೊಂದಿಗೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2015ರ ಕನ್ನಡ ಭಾಷಾ ಅಧಿನಿಯಮದನ್ವಯ ಕನ್ನಡ ಪ್ರಥಮ ಅಥವಾ ದ್ವಿತೀಯ ಭಾಷೆಯಲ್ಲಿ ಬೋಧನೆ ಮಾಡಬೇಕು. ತಪ್ಪಿದ ಪಕ್ಷದಲ್ಲಿ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ