ಹರಿಹರ:
ನೆಲ ಜಲ ಸಂಸ್ಕತಿ ಉಳಿವಿಗಾಗಿ ಹೋರಾಟ ಮಾಡಿದ ಮಹನಿಯರನ್ನ ಸ್ಮರಿಸಿಕೊಂಡಾಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು.
ನಗರದ ಗಾಂಧಿಮೈದಾನದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ 63ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷೆತೆ ವಹಿಸಿ ಮಾತನಾಡಿದ ಅವರು, ಕನ್ನಡ ಭಾಷೆಯು ಕೇವಲ ಭಾಷೆಯಲ್ಲ, ಅದು ಒಂದು ಸಂಸ್ಕøತಿ ಎಂಬುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಪ್ರತಿಯೊಬ್ಬ ಕನ್ನಡಿಗನೂ ನೆಲ ಜಲ ಸಂಸ್ಕøತಿಯ ಉಳಿವು ಹಾಗೂ ಬೆಳವಣಿಗೆಗೆ ಶ್ರಮಿಸಬೇಕು. ಪ್ರಸ್ತುತ ದಿನಮಾನದಲ್ಲಿ ಮಹಾ ನಗರಗಳಲ್ಲಿ ಕನ್ನಡ ಭಾಷೆಯನ್ನು ಮಾತನಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಕನ್ನಡ ಭಾಷೆ ಉಳಿದಿರುವುದು ಕೇವಲ ಗ್ರಾಮೀಣ ಪ್ರದೇಶಗಳಲ್ಲಿ. ಆಗಾಗಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಕನ್ನಡ ಶಾಲೆಯಲ್ಲಿ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸ ನೀಡಿದ ಶಿಕ್ಷಕ ರೇವಣನಾಯ್ಕ್, ಕನ್ನಡ ಭಾಷೆಯು ಎರಡು ಸಾವಿರ ವರ್ಷಗಳ ಹಿಂದೆಯೇ ಹುಟ್ಟಿ, ಪ್ರಾಚೀನ ಭಾಷೆಗಳಲ್ಲಿ ಒಂದಾಗಿದೆ. ಕನ್ನಡ ಭಾಷೆ ಜ್ಞಾನ, ವಿಜ್ಞಾನ ಹಾಗೂ ಸಂಸ್ಕøತಿಯನ್ನು ಹೊಂದಿದೆ. ನಾಡಿನ ಜನತೆಗೆ ಅಕ್ಷರ ಜ್ಞಾನ ಇಲ್ಲದ ಸಂದರ್ಭದಲ್ಲಿಯೂ ಸಂಮೃದ್ದವಾದ ಸಂಸ್ಕøತಿಯನ್ನು ಕಟ್ಟಿಕೊಟ್ಟ ಭಾಷೆ ಕನ್ನಡವಾಗಿದೆ. ವಿಶ್ವದ ಎಲ್ಲಾ ಭಾಷೆಗಳಲ್ಲಿ ಇರುವ ಕೃತಿಗಳಿಗಿಂತ ಕನ್ನಡ ಭಾಷೆಯಲ್ಲಿ ಇರುವ ಕೃತಿಗಳು ಹೆಚ್ಚು ಎಂದು ಹೇಳಿದರು.
ಈ ವೇಳೆ ಕನ್ನಡ ನಾಡು ನುಡಿ, ಸಾಹಿತ್ಯ ಕಲೆ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಚ್. ಕೊಟ್ರಪ್ಪ, ಬಿ. ಹನುಮಂತಚಾರಿ ಸಾರಥಿ, ಸಿ.ಎಸ್ ಗಿರಿಜಾಂಬ ಬನ್ನಿಕೋಡು, ಕೆ.ಸಾವಿತ್ರಿ ಎಂ.ಕೆಂಚಪ್ಪ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ತಾಹಸೀಲ್ದಾರ್ ಕೆ.ವಿಜಯ್ ಕುಮಾರ್ ಧ್ವಜ ವಂದನೆ ಸಲ್ಲಿಸಿದರು. ವಿವಿಧ ಶಾಲಾ ಮಕ್ಕಳಿಂದ ಕನ್ನಡ ಹಾಡುಗಳಿಗೆ ನೃತ್ಯ ಪ್ರದರ್ಶನ ನಡೆಯಿತು.
ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷೆ ಸುಜಾತಾ ರೇವಣಸಿದ್ದಪ್ಪ, ತಾ.ಪಂ ಅಧ್ಯಕ್ಷೆ ಶ್ರೀದೇವಿ, ಉಪಾದ್ಯಕ್ಷೆ ಜಯಮ್ಮ, ಸದಸ್ಯೆ ಲಕ್ಷ್ಮೀ, ಜಿ.ಪಂ ಸದಸ್ಯೆ ಅರ್ಚನಾ, ಕುಣಿಬೆಳೆಕೆರೆ ಗ್ರಾ.ಪಂ ಸದಸ್ಯೆ ಮಂಜಮ್ಮ, ತಾಲೂಕು ಕ.ಸ.ಪ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ, ಇಓ ನೀಲಗಿರಿಯಪ್ಪ, ಬಿಓ ಡಿ.ನರಸಿಂಹಪ್ಪ, ಪೌರಾಯುಕ್ತೆ ಲಕ್ಷ್ಮೀ ಎಸ್, ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಸದಸಯರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
