ಬೆಂಗಳೂರು:
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಹಿರಿಯ ಕಲಾವಿದರು ಮತ್ತು ಚಿತ್ರ ನಿರ್ಮಾಪಕರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಮಲ್ಟಿಪ್ಲೆಕ್ಸ್ ಗಳಲ್ಲಿ ದಿನದ ಪ್ರಧಾನ ಸಮಯಗಳಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಮಾಡಲು ಆದೇಶ ನೀಡುವಂತೆ ಮನವಿ ಸಲ್ಲಿಸಿದರು.ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿಆರ್ ಜಯರಾಜ್, ಮಾಜಿ ಅಧ್ಯಕ್ಷ ಚಿನ್ನೇಗೌಡ, ನಟ ದೊಡ್ಡಣ್ಣ, ನಿರ್ದೇಶಕ ರಾಕ್ ಲೈನ್ ವೆಂಕಟೇಶ್ ಮತ್ತು ಇತರ ಕಲಾವಿದರು ನಿಯೋಗದಲ್ಲಿದ್ದರು ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸ್ಥಳದ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಹಿಂದಿನ ಮುಖ್ಯಮಂತ್ರಿಗಳಲ್ಲಿ ಮೈಸೂರು, ರಾಮನಗರ ಎಂಬ ಗೊಂದಲಗಳಿದ್ದವು. ಈಗಿನ ಸಿಎಂ ಯಡಿಯೂರಪ್ಪ ಕನಕಪುರ ರಸ್ತೆಯಲ್ಲಿ ಎಂದು ಹೇಳುತ್ತಿದ್ದಾರೆ. ನಾವು ಮೈಸೂರಲ್ಲಿ ಮಾಡಿ ಎಂದು ಕೇಳುತ್ತಿದ್ದೇವೆ. ಅದನ್ನು ತಮ್ಮ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ ಎಂದರು.
ಇದೇ ವೇಳೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಚಿತ್ರ ನಿರ್ದೇಶಕರು, ನಿರ್ಮಾಪಕರು ಹಾಗೂ ಇತರರಿಗೆ ಮನೆ ಒದಗಿಸಿಕೊಡುವಂತೆ ಕೇಳಿದ್ದಾರೆ. ಬಿಡಿಎ ಫ್ಲಾಟ್ ಗಳನ್ನು ಕೈಗೆಟಕುವ ದರದಲ್ಲಿ ನೀಡಬಹುದು ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








