ಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ನೀಡದಕ್ಕೆ ಖರ್ಗೆ ಆಕ್ರೋಶ

ಕಲಬುರಗಿ

      ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ನೀಡದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಶ್ರೀಗಳಿಗೆ ಭಾರತರತ್ನ ಸಿಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಹಿಂದೆ ಕೂಡ ಕರ್ನಾಟಕ ಸರ್ಕಾರ, ಸಂಸದರು ಮನವಿ ಸಲ್ಲಿಸಿದ್ದರೂ ಬಿಜೆಪಿ ಸರ್ಕಾರ ಇದನ್ನು ಪರಿಗಣಿಸಲಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ, ದಾಸೋಹ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ಶ್ರೀಗಳ ವ್ಯಕ್ತಿತ್ವವನ್ನು ಸ್ಮರಿಸಿದ ಅವರು, ಅರ್ಹರಿಗೆ ಭಾರತ ರತ್ನ ಸಿಗದಿರುವುದು ತೀವ್ರ ಬೇಸರದ ಸಂಗತಿ ಎಂದರು.

ನಡೆದಾಡುವ ದೇವರು ಎಂದು ಕರೆಯಿಸಿಕೊಳ್ಳುತ್ತಿದ್ದ ಶಿವಕುಮಾರ ಸ್ವಾಮಿಜಿಗಳು ಭಾರತ ರತ್ನಕ್ಕಿಂತಲೂ ಹೆಚ್ಚು. ಶ?ರೀಗಳು ವಿಶ್ವರತ್ನ. ಭಾರತ ರತ್ನ ನೀಡುವುದು ಮನುಷ್ಯರಿಗೆ ಹೊರತು ದೇವರಿಗಲ್ಲ ಎನ್ನುವ ಮೂಲಕ ಶ್ರೀಗಳಿಗೆ ಭಾರತ ರತ್ನದ ಅವಶ್ಯಕತೆಯಿಲ್ಲ ಎಂದು ಪರೋಕ್ಷವಾಗಿ ಹೇಳಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap