ಬೆಂಗಳೂರು
ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಬೈಕ್ ಡಿಕ್ಕಿ ಹೊಡೆದು ಗುರುವಾರ ರಾತ್ರಿ ಮೃತಪಟ್ಟಿರುವ ದುರ್ಘಟನೆ ಕುಮಾರಸ್ವಾಮಿಲೇಔಟ್ನ ಗುಬ್ಬಲಾಳದ 80 ಅಡಿ ರಸ್ತೆ ಬಳಿ ನಡೆದಿದೆ
ಗುಬ್ಬಲಾಳದ ಬಳಿ ಕೆಲಸ ಮುಗಿಸಿಕೊಂಡು ತುರಹಳ್ಳಿಯ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಾರಹಳ್ಳಿ ಗೌಡ (51) ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಮಾರಹಳ್ಳಿ ಗೌಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವ ಸವಾರನಿಗಾಗಿ ಶೋಧ ನಡೆಸಲಾಗಿದೆ.
ಬೈಕ್ – ಬೈಕ್ ಡಿಕ್ಕಿ
ಆವಲಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ 11.30ರ ವೇಳೆ ಬೈಕ್-ಬೈಕಿನ ನಡುವೆ ಡಿಕ್ಕಿ ಸಂಭವಿಸಿ ಒಂದು ಬೈಕ್ನ ಸವಾರ ಮೃತಪಟ್ಟರೆ, ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.ಬನಶಂಕರಿಯ ಆದಿತ್ಯ ನಗರದ ಅಲೋಕ್ (23)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಗಾಯಗೊಂಡಿರುವ ಮತ್ತೊಬ್ಬ ಬೈಕ್ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ.
ಅಲೋಕ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಈ ಎರಡೂ ಪ್ರಕರಣಗಳನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಪೆÇಲೀಸರು ದಾಖಲಿಸಿದ್ದಾರೆ ಎಂದು ಡಿಸಿಪಿ ಸೌಮ್ಯಲತಾ ತಿಳಿಸಿದ್ದಾರೆ.