ಕೊರಟಗೆರೆ
ತಾಲ್ಲೂಕಿನ ಹಲವು ವರ್ಷಗಳ ಬೇಡಿಕೆಯಾಗಿದ್ದ ಕೆಎಸ್ಆರ್ಟಿಸಿ ಡಿಪೋ ಮಂಜೂರಾತಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸರಕಾರಕ್ಕೆ ಮನವಿ ಮಾಡಿದ್ದು, ಸಾರಿಗೆ ಸಚಿವ ಡಿ.ಸಿ ತಮ್ಮಣ್ಣರವರು ಡಿಪೋ ಮಂಜೂರಾತಿಗೆ ಆದೇಶ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ಎಸ್.ದಿನೇಶ್ ತಿಳಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿ, ಕ್ಷೇತ್ರದ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಹಲವು ವರ್ಷಗಳಿಂದ ಸರಿಯಾದ ಸಮಯಕ್ಕೆ ಸರಕಾರಿ ಬಸ್ಸು ವ್ಯವಸ್ಥೆ ಇಲ್ಲದೇ ಕಷ್ಟ ಪಡುವುದನ್ನು ಮನಗಂಡು ಡಾ.ಜಿ.ಪರಮೇಶ್ವರರವರು ಸಾರಿಗೆ ಸಚಿವರಲ್ಲಿ ಮನವಿ ಮಾಡಿದ್ದರು. ಈಗ ಸಾರಿಗೆ ಸಚಿವರು ಕೊರಟಗೆರೆ ಪಟ್ಟಣದಲ್ಲಿ ಕೆಎಸ್ಆರ್ಟಿಸಿ ಡಿಪೋ ನಿರ್ಮಿಸಲು ಆದೇಶಿಸಿದ್ದಾರೆ. ಡಾ.ಜಿ.ಪರಮೇಶ್ವರ್ರವರು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಡಿಪೋ ನಿರ್ಮಾಣಕ್ಕೆ ಭೂಮಿ ಮಂಜೂರಾತಿಗೆ ಆದೇಶಿಸಿದ್ದು, ಕೊರಟಗೆರೆ ಕ್ಷೇತ್ರದ ಜನತೆಯ ಪರವಾಗಿ ಕ್ಷೇತ್ರದ ಶಾಸಕ ಹಾಗೂ ಉಪಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/06/18-jun-koratagere-madhugiri.gif)