ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿ : 8 ಮಂದಿಗೆ ಗಾಯ

ಬೆಂಗಳೂರು

     ಮೆಟ್ರೊ ಪಿಲ್ಲರ್‍ಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಉರುಳಿ ಬಿದ್ದು, 8 ಮಂದಿ ಗಾಯಗೊಂಡಿರುವ ದುರ್ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

    ಗಾಯಗೊಂಡವರಲ್ಲಿ ಎರಡೂವರೆ ವರ್ಷದ ಮಗು ಕೈ ತುಂಡಾಗಿ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಉಳಿದವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನಗರದಿಂದ ಕೊಳ್ಳೆಗಾಲಕ್ಕೆ ಬೆಳಿಗ್ಗೆ 8.30ರ ವೇಳೆ ಹೋಗುತ್ತಿದ್ದ ಕೆಎಸ್‍ಆರ್‍ಸಿಟಿ ಬಸ್ ಜ್ಞಾನಭಾರತಿಯ ಬಸ್ ನಿಲ್ದಾಣದ ಬಳಿ ಬಲಭಾಗದಿಂದ ವಿಆರ್‍ಎಲ್ ವೊಲ್ವೊ ಬಸ್ ವೇಗವಾಗಿ ಹೋಗುತ್ತಿದ್ದಾಗ ಎಡಗಡೆ ಹೋಗಲು ಹೋಗಿ ರಸ್ತೆ ವಿಭಜಕ ಹಾಗೂ ಮೆಟ್ರೊ ಪಿಲ್ಲರ್‍ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

    ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದರೆ, ಕಂಡಕ್ಟರ್‍ಗೆ ಹೆಚ್ಚಿನ ಗಾಯಗಳಾಗಿವೆ. ಬಸ್‍ನಲ್ಲಿ 12 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದ್ದು, ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ಡಾ. ಸೌಮ್ಯಲತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .ಉರುಳಿಬಿದ್ದ ಬಸ್‍ನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು , ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap