ಚಳ್ಳಕೆರೆ
ಹಿರಿಯೂರಿನ ವಿವಿ ಸಾಗರದಿಂದ ವೇದಾವತಿ ನದಿಗೆ ನೀರು ಹರಿಸುವ ಕಾರ್ಯಕ್ಕೆ ಶ್ರಮಿಸಿದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕ್ಷೇತ್ರದ ಕುಡಿಯುವ ನೀರು ನಿವಾರಣೆಗಾಗಿ ಶಿಡ್ಲಯ್ಯನಕೋಟೆ ಬ್ಯಾರೇಜ್ನಿಂದ ಗುರುತ್ವಾಕರ್ಷಣೆ ಮೂಲಕ ಪರಶುರಾಮಪುರ ಫೀಡರ್ ಗೇಟ್ ಕಾಲುವೆಮೂಲಕ 0.03 ಟಿಎಂಸಿ ನೀರನ್ನು ತಾಲ್ಲೂಕಿನ ಕೆರೆಗಳಿಗೆ ಹರಿಸುವ ಆದೇಶವನ್ನು ಸರ್ಕಾರದಿಂದ ಪಡೆಯುವ ಮೂಲಕ ಉತ್ತಮ ಸಾಧನೆಗೈದಿದ್ಧಾರೆ.
ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರ ಮನವಿ ಮೇರೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಶ್ವೇಶ್ವರಯ್ಯ ಜಲ ನಿಗಮ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶ ನೀಡಿ, ಶಾಸಕ ಟಿ.ರಘುಮೂರ್ತಿಯವರ ಮನವಿಯನ್ನು ಆಧರಿಸಿ ಆದೇಶ ನೀಡಿದ್ದು, ಈ ಆದೇಶ ಪ್ರಸ್ತುತ ವರ್ಷಕ್ಕೆ ಮಾತ್ರ ಅನ್ವಯಗೊಳ್ಳಲಿದೆ ಎಂದು ಸ್ವಷ್ಟ ಪಡಿಸಿದ್ದಾರೆ.
ಚಳ್ಳಕೆರೆ ಕ್ಷೇತ್ರದ ಜನತೆಯ ಕುಡಿಯುವ ನೀರಿನ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಲೋಕಸಭಾ ಸದಸ್ಯ ಎ.ನಾರಾಯಣಸ್ವಾಮಿ ಹಾಗೂ ಎಲ್ಲಾ ಹಂತದ ಜನಪ್ರತಿನಿಧಿಗಳಿಗೆ ಶಾಸಕ ಟಿ.ರಘುಮೂರ್ತಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ