ಸಿದ್ಧಗಂಗಾ ಮಠಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭೇಟಿ

ತುಮಕೂರು:

    ಸಿದ್ಧಗಂಗಾ ಮಠಕ್ಕೆ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಸೋಮವಾರ ಭೇಟಿ ನೀಡಿ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದರು.

    ನಗರದ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ಹಿನ್ನೆಲೆ ಆಗಮಿಸಿದ್ದ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಲಿಂ.ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು‌.ಈ ವೇಳೆ ಶಾಸಕ ಜಿ‌.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ರವಿ ಹೆಬ್ಬಾಕ, ನಂದೀಶ್, ರುದ್ರೇಶ್, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಕೊಪ್ಪಲ್ ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link