ಬೆಂಗಳೂರು
ರಸ್ತೆ ದಾಟುತ್ತಿದ್ದ ಹೈಕೋರ್ಟ್ ವಕೀಲರೊಬ್ಬರು ಕಾರು ಹರಿದು ಮೃತಪಟ್ಟಿರುವ ಧಾರುಣ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಗೇಹಳ್ಳಿ ಜಂಕ್ಷನ್ನಲ್ಲಿ ನಡೆದಿದೆ.
ಭಾರತೀ ನಗರದ ಮನೋಹರ್ (39)ಎಂದು ಮೃತಪಟ್ಟ ವಕೀಲರನ್ನು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಶನಿವಾರ ರಾತ್ರಿ 10.30ರ ವೇಳೆ ಮನೋಹರ್ ಕೊಡಿಗೇಹಳ್ಳಿ ಜಂಕ್ಷನ್ ಬಳಿ ಮನೆಗೆ ಹೋಗಲು ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮನೋಹರ್ ರವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಹೆಬ್ಬಾಳ ಸಂಚಾರ ಪೊಲೀಸರು ಅಪಘಾತವೆಸಗಿ ಪರಾರಿಯಾಗಿರುವ ಕಾರು ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
