ಬೆಂಗಳೂರು
ರಾಜ್ಯದಲ್ಲಿ ನಿನ್ನೆ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಸಂಪೂರ್ಣ ಲಾಕ್ಡೌನ್ ಯಶಸ್ವಿಯಾಗಿದ್ದು,ಇದರ ಪರಿಣಾಮ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.
ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಬಸ್, ರೈಲು, ಆಟೋ, ಒಲಾ, ಮಾಕ್ಸಿಕ್ಯಾಬ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಶ್ರಮಿಕ್ ರೈಲುಗಳು ಮಾತ್ರ ಸಂಚರಿಸುತ್ತಿವೆ.
ಔಷಧ ಅಂಗಡಿಗಳು, ಹಣ್ಣು, ತರಕಾರಿ, ಹಾಲು ಮತ್ತಿತರ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ.
ಸದಾ ಪ್ರಯಾಣಿಕರಿಂದ ಗಿಜಿಗುಡುತ್ತಿದ್ದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಇದೇ ಪರಿಸ್ಥಿತಿ ಸಾಂಸ್ಕೃತಿಕ ನಗರಿ ಮೈಸೂರು, ಬಂದರು ನಗರ ಮಂಗಳೂರು, ವಾಣಿಜ್ಯ ನಗರಿ ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಮತ್ತಿತರ ಕಡೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಕಂಡುಬಂದಿದೆ.
ಈ ಮಧೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಭಾನುವಾರದ ಲಾಕ್ಡೌನ್ ಯಶಸ್ವಿಯಾಗಿದೆ. ಪೊಲೀಸರು ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತಿದ್ದಾರೆ. ಯಾವುದೇ ಭಾಗದಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ. ಸರ್ಕಾರದ ಮಾರ್ಗಸೂಚಿಗಳನ್ನು ದಿಕ್ಕರಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಉದ್ಯೋಗ ಅರಸಿ ರಾಜ್ಯಕ್ಕೆ ಬಂದಿದ್ದ 1 ಲಕ್ಷದ 50 ಸಾವಿರ ವಲಸೆ ಕಾರ್ಮಿಕರನ್ನು ಅವರ ಸ್ವಸ್ಥಾನಗಳಿಗೆ ಕಳುಹಿಸಲಾಗಿದೆ ಎಂದು ಬಸವರಾಜ ಮೊಮ್ಮಾಯಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/bommai-1.gif)