ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ..!

ನವದೆಹಲಿ:

     ದೇಶದ ವಿವಾದಾತ್ಮಕ ಮಸೂದೆ ಎಂದೇ ಪರಿಗಣಿಸಲ್ಪಟ್ಟ ಪೌರತ್ವ(ತಿದ್ದುಪಡಿ)ಮಸೂದೆಗೆ ಇಂದು ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಮಸೂದೆ ಪರವಾಗಿ 293 ಮತಗಳು ಚಲಾವಣೆಯಾಗಿದ್ದರೆ ವಿರುದ್ಧವಾಗಿ 82 ಮತಗಳು ಚಲಾವಣೆ ಯಾಗಿವೆ.ಕಲಾಪ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಈ ಉದ್ದೇಶಿತ ಮಸೂದೆಯನ್ನು ಮಂಡಿಸಿದ್ದು . ಈ ತಿದ್ದುಪಡಿ ಮಸೂದೆ ದೇಶದ ಅಲ್ಪಸಂಖ್ಯಾತರ ವಿರುದ್ಧವಾಗಿ ಶೇಕಡಾ 0.001ರಷ್ಟು ಕೂಡ ಇಲ್ಲ ಎಂದು ತಿಳಿಸಿದರು.

     ಸಚಿವರು ಮಸೂದೆಯನ್ನು ಮಂಡಿನೆ ಶುರುವಾದ ಕೂಡಲೆ ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಉಂಟಾಯಿತು. ಆಗ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ದೇಶಕ್ಕೆ ಸ್ವತಂತ್ರ ಬಂದ ನಂತರ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸದೇ ಇದ್ದಿದ್ದರೆ ಇಂದು ತಿದ್ದುಪಡಿ ಮಸೂದೆಯ ಅವಶ್ಯಕತೆ ಬರುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು.

     ನಮ್ಮ ದೇಶದ ಕಾನೂನಿನ ಪ್ರಕಾರ ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಮುಸ್ಲಿಂರು ನಾಗರಿಕತ್ವಕ್ಕೆ ಅರ್ಜಿ ಹಾಕಿದರೆ ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಧಾರ್ಮಿಕ ಕಿರುಕುಳ ಅನುಭವಿಸದ ವ್ಯಕ್ತಿ ಈ ತಿದ್ದುಪಡಿಯಿಂದ ಪ್ರಯೋಜನ ಪಡೆಯುವುದಿಲ್ಲ ಎಂದರು.

    ಈ ದೇಶದಲ್ಲಿ ಸಿಖ್ಖರು, ಕ್ರಿಸ್ತಿಯನ್ನರು, ಪಾರ್ಸಿಗಳು ಮತ್ತು ಜೈನರ ಮೇಲೆ ತಾರತಮ್ಯ ತೋರಲಾಗುತ್ತಿದೆ. ಇಂತಹ ನಾಗರಿಕರಿಗೆ ಈ ತಿದ್ದುಪಡಿ ಮಸೂದೆಯಿಂದ ನಾಗರಿಕತ್ವ ಸಿಗಲಿದೆ. ಮುಸ್ಲಿಂರ ಹಕ್ಕುಗಳು ಈ ತಿದ್ದುಪಡಿ ಮಸೂದೆ ಕಿತ್ತುಕೊಳ್ಳುತ್ತದೆ ಎನ್ನುವುದು ತಪ್ಪು ಎಂದರು, ಪೌರತ್ವ(ತಿದ್ದುಪಡಿ)ಮಸೂದೆ 2019 ಮೂಲಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದ ಮುಸ್ಲಿಂತೇರ ನಿರಾಶ್ರಿತರಿಗೆ ಭಾರತೀಯ ನಾಗರಿಕತ್ವ ಸಿಗಲಿದೆ ಎಂದು ಅಮಿತ್ ಶಾ ಪ್ರತಿಪಾದಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap