ನವದೆಹಲಿ:
ದೇಶದ ವಿವಾದಾತ್ಮಕ ಮಸೂದೆ ಎಂದೇ ಪರಿಗಣಿಸಲ್ಪಟ್ಟ ಪೌರತ್ವ(ತಿದ್ದುಪಡಿ)ಮಸೂದೆಗೆ ಇಂದು ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಮಸೂದೆ ಪರವಾಗಿ 293 ಮತಗಳು ಚಲಾವಣೆಯಾಗಿದ್ದರೆ ವಿರುದ್ಧವಾಗಿ 82 ಮತಗಳು ಚಲಾವಣೆ ಯಾಗಿವೆ.ಕಲಾಪ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಈ ಉದ್ದೇಶಿತ ಮಸೂದೆಯನ್ನು ಮಂಡಿಸಿದ್ದು . ಈ ತಿದ್ದುಪಡಿ ಮಸೂದೆ ದೇಶದ ಅಲ್ಪಸಂಖ್ಯಾತರ ವಿರುದ್ಧವಾಗಿ ಶೇಕಡಾ 0.001ರಷ್ಟು ಕೂಡ ಇಲ್ಲ ಎಂದು ತಿಳಿಸಿದರು.
ನಮ್ಮ ದೇಶದ ಕಾನೂನಿನ ಪ್ರಕಾರ ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಮುಸ್ಲಿಂರು ನಾಗರಿಕತ್ವಕ್ಕೆ ಅರ್ಜಿ ಹಾಕಿದರೆ ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಧಾರ್ಮಿಕ ಕಿರುಕುಳ ಅನುಭವಿಸದ ವ್ಯಕ್ತಿ ಈ ತಿದ್ದುಪಡಿಯಿಂದ ಪ್ರಯೋಜನ ಪಡೆಯುವುದಿಲ್ಲ ಎಂದರು.
ಈ ದೇಶದಲ್ಲಿ ಸಿಖ್ಖರು, ಕ್ರಿಸ್ತಿಯನ್ನರು, ಪಾರ್ಸಿಗಳು ಮತ್ತು ಜೈನರ ಮೇಲೆ ತಾರತಮ್ಯ ತೋರಲಾಗುತ್ತಿದೆ. ಇಂತಹ ನಾಗರಿಕರಿಗೆ ಈ ತಿದ್ದುಪಡಿ ಮಸೂದೆಯಿಂದ ನಾಗರಿಕತ್ವ ಸಿಗಲಿದೆ. ಮುಸ್ಲಿಂರ ಹಕ್ಕುಗಳು ಈ ತಿದ್ದುಪಡಿ ಮಸೂದೆ ಕಿತ್ತುಕೊಳ್ಳುತ್ತದೆ ಎನ್ನುವುದು ತಪ್ಪು ಎಂದರು, ಪೌರತ್ವ(ತಿದ್ದುಪಡಿ)ಮಸೂದೆ 2019 ಮೂಲಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದ ಮುಸ್ಲಿಂತೇರ ನಿರಾಶ್ರಿತರಿಗೆ ಭಾರತೀಯ ನಾಗರಿಕತ್ವ ಸಿಗಲಿದೆ ಎಂದು ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/cabinet-passed-the-2019-citizenship-amendment-bill.gif)