ದಾವಣಗೆರೆ:
ಲಾರಿ ಮತ್ತು ಕಾರು ಪರಸ್ಪರ ಡಿಕ್ಕಿಯಾದ ಪರಿಣಾಮ ಲಾರಿ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಎಸ್ ಎಸ್ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ -4ರಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಅಪಘಾತದಿಂದಾಗಿ ಲಾರಿಯಲ್ಲಿ ಸಿಕ್ಕಿಕೊಂಡಿದ್ದ ಚಾಲಕನನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ವಿಆರ್ಎಲ್ ಗೂಡ್ಸ್ ಲಾರಿ ಹಾಗೂ ಬೆಂಗಳೂರಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಈ ಅವಘಡ ಸಂಭವಿಸಿದೆ. ಲಾರಿ ಪಲ್ಟಿಯಾದ ಹಿನ್ನೆಲೆ ಕೆಲ ಹೊತ್ತು ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿತ್ತು. ಸ್ಥಳಕ್ಕೆ ದಾವಣಗೆರೆ ಸಂಚಾರಿ ಪೊಲೀಸರು ಆಗಮಿಸಿ ರಸ್ತೆಗೆ ಅಡ್ಡವಾಗಿದ್ದ ಲಾರಿಯನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿ ನಂತರ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
