ಕೊರಟಗೆರೆ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಂದ ಸಾರಿಗೆ ಸಂಸ್ಥೆ 10 ಲಕ್ಷಕ್ಕೂ ಅಧಿಕ ಹಣ ಪಡೆದು, ತುಮಕೂರು ಮತ್ತು ಕೊರಟಗೆರೆ ಡಿಪೋದಿಂದ 2 ಸಾವಿರಕ್ಕೂ ಹೆಚ್ಚು ಸರಕಾರಿ ಬಸ್ಪಾಸ್ ವಿತರಣೆ ಮಾಡಿದ್ದಾರೆ. ಪ್ರತಿನಿತ್ಯ 87 ಬಸ್ಸುಗಳ ಸಂಚಾರದ ವ್ಯವಸ್ಥೆ ಇದ್ದರೂ ಸಹ ವಿದ್ಯಾರ್ಥಿಗಳಿಗೆ ಪ್ರಯೋಜವಿಲ್ಲದೆ ಸಮಸ್ಯೆ ಎದುರಾಗಿದೆ. ಸಾರಿಗೆ ಸಂಸ್ಥೆಯ ನಿರ್ವಹಣೆ ವೈಫÀಲ್ಯದಿಂದ ಬಸ್ಪಾಸ್ ಇದ್ದರೂ ವಿದ್ಯಾರ್ಥಿಗಳು ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ.
ಕೊರಟಗೆರೆ ಮತ್ತು ತುಮಕೂರು ಘಟಕದಿಂದ ವಿದ್ಯಾರ್ಥಿಗಳಿಗೆ ನೀಡಿರುವ ಬಸ್ ಪಾಸಿನ ಅಂಕಿ ಅಂಶದ ಪ್ರಕಾರ ಸರಕಾರಿ ಬಸ್ಸಿನ ನಿರ್ವಹಣೆ ಸಮಯ ಇಲ್ಲದಾಗಿದೆ. ಪಾವಗಡ ಮತ್ತು ಮಧುಗಿರಿ ಘಟಕದಿಂದ ಹೊರಡುವ ಬಸ್ಸುಗಳು ಕೊರಟಗೆರೆ ನಿಲ್ದಾಣಕ್ಕೆ ಬರದೆ ನೇರವಾಗಿ ತುಮಕೂರು ನಗರಕ್ಕೆ ಸಂಚಾರ ನಡೆಸುತ್ತಿವೆ. ಪರಿಶೀಲನೆ ಮತ್ತು ತಪಾಸಣೆ ನಡೆಸುವ ಮಧುಗಿರಿ ಸಂಚಾರಿ ವ್ಯವಸ್ಥಾಪಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಸಮಸ್ಯೆ ಹೆಚ್ಚಾಗುತ್ತಿದೆ.
ತುಮಕೂರು ಮತ್ತು ಕೊರಟಗೆರೆ ಪಟ್ಟಣದ ಬಹುತೇಕ ಶಾಲಾ ಕಾಲೇಜು ಪ್ರಾರಂಭ ಆಗೋದು ಬೆ.9 ರಿಂದ 10 ಗಂಟೆಗೆ ನಿಗದಿಯಾಗಿದೆ. ಗ್ರಾಮೀಣ ಪ್ರದೇಶಗಳಿಂದ ಪಟ್ಟಣಕ್ಕೆ ಸಂಚರಿಸಲು ಬೆ.7 ಗಂಟೆಯಿಂದ 9 ರವರೆಗೆ ಮಾತ್ರ ವಿದ್ಯಾರ್ಥಿಗಳಿಗೆ ಸರಕಾರಿ ಬಸ್ಸಿನ ಅವಶ್ಯಕತೆ ಇದೆ. ಆದರೆ ಪ್ರತಿ ಹದಿನೈದು ನಿಮಿಷಕ್ಕೊಮ್ಮೆ ಬರುವ 10 ಬಸ್ಸುಗಳಲ್ಲಿ 2 ಸಾವಿರ ವಿದ್ಯಾರ್ಥಿಗಳು ಸಂಚಾರ ಮಾಡುವುದಾದರೂ ಹೇಗೆ ಎಂಬುದೆ ಯಕ್ಷಪಶ್ನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
