ಬೆಂಗಳೂರು
ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ಸಿಪಿ ಸರ್ಕಾರ ರಚನೆ ವಿಚಾರದಲ್ಲಿ ಅಲ್ಲಿನ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ರಬ್ಬರ್ ಸ್ಟ್ಯಾಂಪ್ನಂತೆ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ರಾಜ್ಯಪಾಲರು ಬಿಜೆಪಿ ವಕ್ತಾರರಂತೆ ನಡೆದುಕೊಂಡಿದ್ದಾರೆ. ಬಹು.ಮತ ಸಾಬೀತಿಗೆ ಸಾಕಷ್ಟು ಸಮಯ ಕೊಟ್ಟಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಎನ್ ಸಿಪಿ ಶಾಸಕರಿಗೂ ಸ್ಪಷ್ಟ ಮಾಹಿತಿಯಿಲ್ಲ. ಬಿಜೆಪಿ ದೇಶದಲ್ಲಿ ಪೆಡಂಭೂತವಾಗಿ ಮಾಡಬಾರದ್ದನ್ನು ಮಾಡುತ್ತಿದೆ. ರಾಷ್ಟ್ರಪತಿ ಈ ರೀತಿ ನಡೆದುಕೊಂಡಿರುವುದು ದುರದೃಷ್ಟಕರ.ರಾಜ್ಯಪಾಲರ ನಡೆಯೂ ಸಹ ತಲೆತಗ್ಗಿಸುವಂತಾಗಿದೆ ಎಂದು ವಿಷಾದಿಸಿದರು. ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ಬಿಜೆಪಿಗೆ ತಾನು ಏನು ಬೇಕಾದರೂ ಮಾಡಿದರೂ ನಡೆಯುತ್ತದೆ ಎಂಬ ಭಾವನೆಯಿದೆ. ಮಹಾರಾಷ್ಟ್ರದ ಘಟನೆ ಕಪ್ಪು ಚುಕ್ಕಿಯಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/EKDSGv2VUAArkQx.gif)