ಚಿತ್ರದುರ್ಗ :
ಲೋಕಸಭೆ ಸಾರ್ವತ್ರಿಕ ಚುನವಣೆಗೆ ಏ.18 ರಂದು ಮತದಾನ ನಡೆಲಿದ್ದು, ಮಹಿಳೆಯರು ಸ್ವಯಂ ಪ್ರೇರಿತವಾಗಿ, ಮತಗಟ್ಟೆಗಳಿಗೆ ಬಂದು ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಬಲ ಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮತಿ ಅಧ್ಯಕ್ಷೆ ಸಿ. ಸತ್ಯಭಾಮ ಹೇಳಿದರು.
ನಗರದ ಡಿಸಿ ಕಚೇರಿ ವೃತ್ತದಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ಮತದಾನ ಕುರಿತ ಅರಿವು ಮೂಡಿಸುವ ಬೃಹತ್ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆ ನಿಮಿತ್ಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದೆ. ಮಹಿಳೆಯರು ಕಳೆದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಮಾಡದಿರುವುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಈ ಬಾರಿ ಹಾಗೆ ಆಗದಂತೆ, ಮಹಿಳೆಯರು ಏ.18 ರಂದು ನಡೆಯುವ ಪ್ರಜಾಪ್ರಭುತ್ವದ ಹಬ್ಬದಲ್ಲಿ ಹೆಚ್ಚಿನದಾಗಿ ಭಾಗವಹಿಸಿ ಮಹಿಳೆಯರ ಶಕ್ತಿ ಎನು ಎಂಬುದನ್ನು ತೋರಿಸಬೇಕು ಎಂದು ಹೇಳಿದರು.
ಒಬ್ಬ ಮಹಿಳೆಯು ಶಿಕ್ಷಣವನ್ನು ಕಲಿತರೆ ಶಾಲೆಯೊಂದು ತೆರೆದಂತೆ, ಹಾಗೆಯೇ ಒಬ್ಬ ಮಹಿಳೆ ಮತದಾನ ಮಾಡಿದರೆ ಇಡೀ ಕುಟುಂಬವೇ ಸಕ್ರಿಯವಾಗಿ ಮತದಾನದಲ್ಲಿ ತೊಡಗಿಸಿಕೊಳ್ಳುತ್ತದೆ. ಅದರಿಂದ ಜಿಲ್ಲೆಯಾದ್ಯಂತ ಮಹಿಳೆಯರನ್ನು ಹೆಚ್ಚಿನದಾಗಿ ಮತದಾನದಲ್ಲಿ ತೊಡಗಿಸಿಕೊಳ್ಳುವಂತಾಗಲು, ಮಹಿಳೆಯರಿಗೆ ಆದ್ಯತೆ ನೀಡಿ, ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಿ. ಸತ್ಯಭಾಮ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಅಧಿಕಾರಿ ರಾಜಾನಾಯಕ್ ಹಾಗೂ ಮಹಿಳೆಯರು ಬಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಮತದಾನ ಜಾಗೃತಿ ಜಾಥಾದಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಗೆಲ್ಲಿಸಿ, ನಮ್ಮ ಮತ ನಮ್ಮ ಹಕ್ಕು, ಮತ ನಿಮ್ಮ ಹಕ್ಕು ನಿಮ್ಮ ಧ್ವನಿ, ಆಮಿಷಗಳನ್ನು ನಿರಾಕರಿಸಿ ನಿಮ್ಮಿಷ್ಟದಂತೆ ನಿರ್ಭೀತಿಯಿಂದ ಮತ ಹಕ್ಕು ಚಲಾಯಿಸಿ ಎಂಬ ಘೋಷಣೆ ಫಲಕಗಳೊಂದಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಜಾಥಾ ಸಾಗಿಬಂದಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
