ನಿವೃತ್ತ ನೌಕರರ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ

ಗುಬ್ಬಿ

           ಕಳೆದ ಹಲವು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿರುವ ನಿವೃತ್ತ ನೌಕರರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುವುದರ ಜೊತೆಗೆ ನಿವೃತ್ತ ನೌಕರರ ವೇತನ ತಾರತಮ್ಯ ಸೇರಿದಂತೆ ಹಲವು ರೀತಿಯ ಸಮಸ್ಯೆಗಳನ್ನು ಬಗೆಹರಿಸುವತ್ತ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಬಿ.ಕೋಡಿಹಳ್ಳಿ ಮಠದ ಶ್ರೀಬಸವಭೃಂಗೇಶ್ವರಸ್ವಾಮೀಜಿ ತಿಳಿಸಿದರು.

           ಪಟ್ಟಣದ ಕೃಷಿ ಇಲಾಖೆ ಪಕ್ಕದಲ್ಲಿರುವ ನಿವೃತ್ತ ನೌಕರರ ಸಂಘದ ಕಚೇರಿ ಆವರಣದಲ್ಲಿ ನಡೆದ ತಾಲ್ಲೂಕು ನಿವೃತ್ತ ನೌಕರರ ದಿನಾಚರಣೆ ಮತ್ತು 80 ವರ್ಷ ತುಂಬಿದ ಹಿರಿಯ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಯೋನಿವೃತ್ತ ನೌಕರರ ಮೂಲಭೂತ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದರ ಜೊತೆಗೆ ಅವರನ್ನು ಪೂಜ್ಯ ಭಾವನೆಯಿಂದ ಕಾಣಬೇಕಿದೆ. ಅವರಿಗೆ ಆರೋಗ್ಯ ಸೌಲಭ್ಯ ಮುಂತಾದ ಸೌಲಭ್ಯಗಳನ್ನು ನಿಯಮಾನುಸಾರ ನಿಗದಿತ ಅವಧಿಯಲ್ಲಿ ನೀಡುವತ್ತ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕಿದೆ ಎಂದು ತಿಳಿಸಿದರು.

          ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮಹದೇವರಾವ್ ಬೋಬಡೆ ಮಾತನಾಡಿ ನಿವೃತ್ತ ನೌಕರರ ಸಮಸ್ಯೆಗಳನ್ನು ಸರ್ಕಾರ ತ್ವರಿತವಾಗಿ ಬಗೆಹರಿಸುವುದರ ಜೊತೆಗೆ ಅವರಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದ ಅವರು, ನಿವೃತ್ತ ನೌಕರರಿಗೆ ವೈದ್ಯಕೀಯ ಸೌಲಭ್ಯ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಮೂಲಭೂತ ಸೌಲಭ್ಯಗಳನ್ನು ನಿಯಮಾನುಸಾರ ಕಲ್ಪಿಸುವತ್ತ ಸರ್ಕಾರ ಚಿಂತನೆ ನಡೆಸಬೇಕಿದೆ ಎಂದು ತಿಳಿಸಿದರು.

           ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ರಾಮಯ್ಯ ಮಾತನಾಡಿ ಸಂಘವು ಹತ್ತು ಹಲವು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುವುದರ ಜೊತೆಗೆ ನಿವೃತ್ತ ನೌಕರರ ಮೂಲಭೂತ ಸಮಸ್ಯೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯಗಳನ್ನು ಮಾಡಲು ಚಿಂತನೆ ನಡೆಸಿರುವುದಾಗಿ ತಿಳಿಸಿದರು.ಇದೆ ಸಂದರ್ಭದಲ್ಲಿ 80 ವರ್ಷ ಪೂರ್ಣಗೊಂಡ ನಿವೃತ್ತ ನೌಕರರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

           ಕಾರ್ಯಕ್ರಮದಲ್ಲಿ ತಾಲ್ಲೂಕು ಸಂಘದ ಪದಾಧಿಕಾರಿಗಳಾದ ರೇಣುಕಾಪ್ರಸಾದ್, ಎಸ್.ವಿ.ವೆಂಕಟಗಿರಿ, ಆರ್.ಬಿ.ಜಯಣ್ಣ, ಆರ್.ವೆಂಕಟೇಶಯ್ಯ, ಜಿ.ಗೋವಿಂದಯ್ಯ, ಬಿ.ರಾಮಯ್ಯ, ಟಿ.ಎಸ್.ಶಿವಕುಮಾರ್, ಜಿ.ಆರ್.ಅಪ್ಪಾಜಿ, ಕೆಂಪಗಂಗಯ್ಯ, ಶ್ರೀನಿವಾಸಮೂರ್ತಿ , ಮಹಾದೇವಯ್ಯ, ಗುರಪ್ಪ, ಚನ್ನಬಸವೇಗೌಡ, ವಿಶ್ವನಾಥ್, ಧರ್ಮಪ್ಪ ಮುಂತಾದವರು ಭಾಗವಹಿಸಿದ್ದರು.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link