ಮಳೆಗಾಗಿ ಕರವೇ ಕಾರ್ಯಕರ್ತರಿಂದ ವಿಶೇಷ ಪೂಜೆ

ಹುಳಿಯಾರು:

     ಹುಳಿಯಾರಿನ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮಳೆಗಾಗಿ ಪ್ರಾರ್ಥಿಸಿ ಇಲ್ಲಿನ ಶ್ರೀ ಆಂಜನೇಯಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

       ಸಾಮೂಹಿಕವಾಗಿ ದೇವಾಲಯಕ್ಕೆ ತೆರಳಿ ಗ್ರಾಮಸ್ಥರು ಹಣ್ಣುಕಾಯಿ, ನೈವೇದ್ಯ ಮಾಡಿಸಿದರಲ್ಲದೆ, ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗೆ ಅನುಕೂಲ ಕಲ್ಪಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು.

       ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಕೋಳಿಶ್ರೀನಿವಾಸ್ ಅವರು ಮಾತನಾಡಿ ಮಳೆ ಇಲ್ಲದೆ ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಅಂತರ್ಜಲ ಬರಿದಾಗಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಹಾಗಾಗಿ ಉತ್ತಮ ಮಳೆ ಬೆಳೆಯಾಗಿ ನಾಡಿನ ಸಮೃದ್ದಿಯಾಗಲೆಂದು ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.

       ಕರವೇ ಗೌರವ ಅಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಲಕ್ಷ್ಮೀಕಾಂತ್, ಸಿನಿಮಾ ಕಲಾವಿದ ಗೌಡಿ, ಬಸವರಾಜು, ರಘು, ಹರೀಶ್, ಚನ್ನಕೇಶವ, ಅಂಜನಿ, ನವೀನ್, ಬೇಕರಿ ಪ್ರಕಾಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link