ಹಿರಿಯೂರು :
ನಗರದಲ್ಲಿ ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರವಾಗಿ ಮಾಜಿ ಪುರಸಭೆ ಅಧ್ಯಕ್ಷರಾದ ಆರ್.ವಾಸುದೇವ್ರವರ ನೇತೃತ್ವದಲ್ಲಿ ಮನೆಮನೆಗೆ ತೆರಳಿ ಮತ ಯಾಚಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖಂಡರಾದ ಟಿ.ಓಂಕಾರಪ್ಪ, ತಾಲ್ಲೂಕು ಎಸ್ಸಿ ಘಟಕದ ಉಪಾಧ್ಯಕ್ಷರಾದ ವಿ.ಶಿವಕುಮಾರ್ ಹಾಗೂ ತಂಡದವರು ಭಾಗವಹಿಸಿದ್ದು, ನಗರದ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರವಾಗಿ ಮತ ಯಾಚಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
