ಮಂಗಳೂರು- ಸಕಲೇಶಪುರ ರೈಲು ಮಾರ್ಗ ಸಂಚಾರಕ್ಕೆ ಮುಕ್ತ

ಬೆಂಗಳೂರು

      ಮಳೆಗಾಲದಲ್ಲಿ ಗುಡ್ಡ ಕುಸಿತದಿಂದ ಮಂಗಳೂರು- ಸಕಲೇಶಪುರ ರೈಲು ಮಾರ್ಗದ ಹಳಿ ಮೇಲೆ ಬಿದಿದ್ದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಮಂಗಳೂರು- ಬೆಂಗಳೂರು ಪ್ಯಾಸೆಂಜರ್ ರೈಲು ಆರಂಭ ಆಗುವ ಸಾಧ್ಯತೆ ಇದೆ.

      ನಿನ್ನೆ ಈ ಮಾರ್ಗದಲ್ಲಿ ಎರಡು ಗೂಡ್ಸ್ ರೈಲುಗಳ ಪರೀಕ್ಷಾರ್ಥ ಸಂಚಾರ ನಡೆಸಿವೆ. ಸುಬ್ರಹ್ಮಣ್ಯ -ಸಕಲೇಶಪುರ ಮಾರ್ಗದಲ್ಲಿ ಆಗಸ್ಟ್ ತಿಂಗಳಿನಿಂದ ರೈಲು ಓಡಾಟ ಸ್ಥಗಿತಗೊಂಡಿತ್ತು. ಅಕ್ಟೋಬರ್ 10 ರವರೆಗೂ ನಿಷೇಧ ಆದೇಶ ಜಾರಿಯಲ್ಲಿದೆ.

      ಕಾಮಗಾರಿ ಮುಗಿದು ಸಂಚಾರಕ್ಕೆ ಮಾರ್ಗ ಮುಕ್ತವಾಗಿದ್ದರೂ ಇದೇ ತಿಂಗಳ 10 ರ ಬಳಿಕವೇ ಪ್ಯಾಸೆಂಜರ್ ರೈಲು ಓಡಾಟಕ್ಕೆ ನೈರುತ್ಯ ರೈಲ್ವೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ   

Recent Articles

spot_img

Related Stories

Share via
Copy link
Powered by Social Snap