ಐಎಂಎ ಹಗರಣ ; ಮನ್ಸೂರ್ ಕಸ್ಟಡಿ ವಿಸ್ತರಣೆ ..!!!

ಬೆಂಗಳೂರು

     ಬಹುಕೋಟಿ ಐಎಂಎ (ಮಾನಿಟರಿ ಅಡ್ವೈಸರಿ)ಹಗರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ ಅನ್ನು ಮತ್ತೆ ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ಒಪ್ಪಿಸಿ ನಗರದ ಒಂದನೇ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ.

     ಈ ಹಿಂದೆ ನೀಡಿದ್ದ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ನ್ಯಾಯಾಧೀಶ ಶಿವಶಂಕರ ಡಿ.ಅಮರಣ್ಣವರ, ಆರೋಪಿಯ ತನಿಖೆ ಪ್ರಗತಿಯಲ್ಲಿದ್ದು, ಇನ್ನು ಹಲವು ಮಾಹಿತಿಗಳನ್ನು ಕಲೆ ಹಾಕಬೇಕಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಇನ್ನಷ್ಟು ದಿನಗಳ ಕಾಲ ತಮ್ಮ ವಶಯಕ್ಕೆ ನೀಡಬೇಕು ಎಂಬ ಇ.ಡಿ ವಕೀಲರ ವಾದವನ್ನು ಪರಿಗಣಿಸಿದರು.

ಅಧಿಕಾರಿಗಳಿಗೆ ಜಾಮೀನು

      ಐಎಂಎ ಹಗರಣದಲ್ಲಿ ಎಸ್ ಐ ಟಿ ಅಧಿಕಾರಿಗಳ ಬಂಧನಕ್ಕೀಡಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ಹಾಗೂ ಬೆಂಗಳೂರು ನಗರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap