ದಾವಣಗೆರೆ
ಮಲೇಬೆನ್ನೂರು ಪುರಸಭೆ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಸಾರ್ವಜನಿಕ ಸ್ಥಳಗಳಲ್ಲಿ ಮತದಾನದ ಮಹತ್ವ ಸಾರುವ ಕರ ಪತ್ರಗಳನ್ನು ಹಂಚಿಕೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.ಪ್ರಮುಖವಾಗಿ ಸಂತೆ ಮಾರುಕಟ್ಟೆಯಲ್ಲಿನ ಸಾರ್ವಜನಿಕರು, ವ್ಯಾಪಾರಸ್ಥರು ಬೀದಿಬದಿ ವ್ಯಾಪಾರಸ್ಥರು, ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಒಳಗೊಂಡಂತೆ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರತಿಜ್ಞೆ ಮಾಡಿಸಿ, ಮತದಾನದ ಬಗ್ಗೆ ಅರಿವು ಮೂಡಿಸುವ ಕರ ಪತ್ರ ಹಂಚಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
