ಹಿರಿಯೂರು :
ಲೋಕಸಭಾ ಚುನಾವಣೆಗೆ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು. ಈ ದಿಸೆಯಲ್ಲಿ ತಾಲ್ಲೂಕು ಆಡಳಿತ ಸಹ ಮತದಾರರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ನಫೀಜಾ ಬೇಗಂ ಹೇಳಿದರು.
ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ನಗರಸಭೆ ಹಾಗೂ ತಾಲ್ಲೂಕುಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಗರಸಭೆ ಆಯುಕ್ತರಾದ ಮಹಂತೇಶ್ ಮಾತನಾಡಿ, ಏಪ್ರಿಲ್ 18ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರೀಕರು ಮತದಾನ ಮಾಡಬೇಕು ಯಾವುದೇ ಮತದಾರರ ಮತದಾನದಿಂದ ಹೊರಗುಳಿಯಬಾರದು ಪ್ರತಿಯೊಬ್ಬರು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯಾ ಎಂಬ ಬಗ್ಗೆ ಪರಿಶೀಲಿಸಿಕೊಳ್ಳಬೇಕು, ಅಲ್ಲದೇ ಚುನಾವಣೆ ನೀತಿಸಂಹಿತೆ ಉಲ್ಲಂಘನೆಯಾದಲ್ಲಿ ಸಿವಿಜೀಲ್ ಮೊಬೈಲ್ ಆಪ್ ಮೂಲಕ ದೊರುದಾಖಲಿಸಬೇಕು, ಚುನಾವಣೆಗೆ ಸಂಬಂದಿಸಿದಂತೆ ಯಾವುದೇಮಾಹಿತಿ ಮತ್ತು ದೊರುಗಳಿಗೆ ಚುನಾವಣಾಧಿಕಾರಿಗಳನ್ನು ಸಂರ್ಪಕಿಸಬಹುದು. ಎಂಬುದಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇ.ಒ.ರೇಣುಕುಮಾರ್, ನಗರಸಭೆ ವ್ಯವಸ್ಥಾಪಕಿ ಲೀಲಾವತಿ ಸೇರಿದಂತೆ ನಗರಸಭೆ ಸಿಬ್ಬಂದಿವರ್ಗ ಚುನಾವಣಾ ಇಲಾಖೆ ಶಿರಸ್ತೆದಾರ್ ಸುರೇಶ್ ಸೇರಿದಂತೆ ಚುನಾವಣಾ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
