ದಾವಣಗೆರೆ
ಲೋಕಸಭಾ ಚುನಾವಣೆ-2019ರ ಮತದಾನ ಜಾಗೃತಿ ಕಾರ್ಯಕ್ರಮದಡಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಾ.25 ರಂದು ಮತದಾನದ ಅರಿವು ಕಾರ್ಯಕ್ರಮವನ್ನು ಜಗಳೂರು ತಾಲ್ಲೂಕು ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೋಧಕರಿಗೆ ಮತ್ತು ಕಲಿಕಾರ್ಥಿಗಳಿಗೆ ಏರ್ಪಡಿಸಿ ಸಾಕ್ಷರತೆಯ ಮಹತ್ವ ಹಾಗೂ ಮತದಾನದ ಮಹತ್ವವನ್ನು ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು ಹಾಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ, ಗ್ರಾಮದಲ್ಲಿ ಜಾಥಾ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಜಿ.ಆರ್.ತಿಪ್ಪೇಶಪ್ಪ ಹಾಗೂ ಕಾರ್ಯಕ್ರಮ ಸಹಾಯಕ ಟಿ.ಗುರುಶಾಂತಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ವತಿಯಿಂದ ರಮೇಶ್ ಮತ್ತು ಶ್ವೇತಾ ಇತರರು ಭಾಗವಹಿಸಿದ್ದರೆಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/vayaskara-shikshana-sveep.gif)