ಹಾವೇರಿ:
ಮತದಾನ ಎನ್ನುವುದು ಪ್ರಜಾ ಪ್ರಭುತ್ವದ ಆಧಾರ ಸ್ತಂಭ. ಈ ಸ್ತಂಭ ಗಟ್ಟಿಯಾಗಿರಬೇಕಾದರೆ ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ. ಅಂದಾಗ ಮಾತ್ರ ಪ್ರಜಾ ಪ್ರಭುತ್ವ ಯಶಸ್ಸಿನ ಹಾದಿಯಲ್ಲಿ ಸಿಗಲಿದೆ ಎಂದು ಹಾವೇರಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಹೆಳೀದರು.
ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಮತ್ತು ವಿವಿ ಪ್ಯಾಟ ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು. ಪ್ರಜ್ಞಾವಂತ ಮತದಾರರು ಪ್ರಜಾ ಪ್ರಭುತ್ವದ ಮೂಲ ಕ್ರಿಯೆಯಾಗಿರುವ ಮತದಾನದಲ್ಲಿ ಕಡ್ಡಾಯವಾಗಿ ಪಾಲಗೊಂಡು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕಿದೆ
ನಾವು ಮತದಾನ ಮಾಡುವುದಲ್ಲದೆ ನಮ್ಮ ಸುತ್ತಮುತ್ತಲಿನವರು ಮತದಾನ ಮಾಡಿದ ಬಗ್ಗೆ ಖಾತ್ರಿ ಪಡಿಸಿಕೋಳ್ಳಬೇಕು. ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವಕುರಿತು, ತಿಳಿಹೇಳುವ ಮೂಲಕ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದರು.
ಪಂಚಾಯತ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ಶೋಭಾ ನಾಯಕ ಮಾತನಾಡಿ ಸರಕಾರಿ ಸಿಬ್ಬಂದಿ ತಮ್ಮ ಪರಿಸರದ ಮತದಾರರು ಮತಚಲಾಯಿಸುವಂತೆ ನೋಡಿಕೋಳ್ಳಬೇಕಿದೆ. ಪಂಚಾಯತಿ ವ್ಯಾಪ್ತಿಯಲ್ಲಿ ಮತದಾನ ಶೇಕಡಾ ಪ್ರಮಾಣ ಹೆಚ್ಚಿಸುವಲ್ಲಿ ಕಾಳಜಿವಹಿಸಬೇಕಿದೆ ಎಂದರು. ಇದೆ ಸಂದರ್ಭದಲ್ಲಿ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಹಾಗೂ ವಿವಿಪ್ಯಾಟ ಕುರಿತು ಪ್ರಾತ್ಯಕ್ಷಿಕೆ ನಡೆಯಿತು . ಕಾರ್ಯಕ್ರಮದಲ್ಲಿ ಪಂಚಾಯತಿ ಸಿಬ್ಬಂದಿ ವರ್ಗದವರು, ಪ್ರಾಥಮಿಕ ಶಾಲಾ ಸಿಕ್ಷಕರು ಆಶಾ/ಅಂಗನವಾಡಿ ಕಾರ್ಯಕರ್ತೆಯರು,ಊರನಾಗರಿಕರು ಭಾಗವಹಿಸಿದ್ದರು.