ಅ.31ರಂದು ಬುಧವಾರ ಬೃಹತ್ ಪ್ರತಿಭಟನೆ

ಹೊನ್ನಾಳಿ:

     ಅಖಂಡ ಕರ್ನಾಟಕ ರೈತ ಸಂಘ(ಪಕ್ಷಾತೀತ) ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಘಟಕಗಳ ವತಿಯಿಂದ ರೈತರ ವಿವಿಧ ಬೇಡಿಕೆಗಳ ಈಢೆರಿಕೆಗಾಗಿ ಅ.31ರಂದು ಬುಧವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಎಚ್.ನಾಗರಾಜಪ್ಪ ದೊಡ್ಡೇರಹಳ್ಳಿ ಹೇಳಿದರು.
ಸೋಮವಾರ ಪತ್ರಿಕಾ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಆವರು ಮಾತನಾಡಿದರು.

     ಅಂದು ಬೆಳಿಗ್ಗೆ 10ಕ್ಕೆ ಹಿರೇಕಲ್ಮಠದಿಂದ ಮೆರವಣಿಗೆ ಹೊರಟು ತಾಲೂಕು ಕಚೇರಿಗೆ ತಲುಪುವುದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

      ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಲು ಮೀನ ಮೇಷ ಮಾಡುತ್ತಿದ್ದು ಸರ್ಕಾರಗಳ ವಿರುದ್ಧ ಪ್ರತಿಭಟಿಸಿ ಹಕ್ಕೋತ್ತಾಯ ಮಾಡಲಾಗುವುದು ಎಂದು ಹೇಳಿದರು.

       ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಸಹಕಾರ ಸಂಘಗಳಲ್ಲಿ ಮಾಡಿದ ಸಾಲ ಮನ್ನಾ ಬಗ್ಗೆ ತಕ್ಷಣ ಋಣಭಾರ ಪತ್ರ ನೀಡಬೇಕು, ಕೇಂದ್ರ ಸರ್ಕಾರ ಈಗಾಗಲೆ ಬೆಂಬಲ ಬೆಲೆ ನಿಗದಿಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು, ಬಗರ್‍ಹುಕುಂ ಸಾಗುವಳಿದಾರರಿಗೆ ಪಹಣಿ, ಮ್ಯೂಟೇಶನ್ ಪತ್ರಗಳನ್ನು ನೀಡುವುದು ಸೇರಿ ಒಟ್ಟು 9 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಹೇಳಿದರು.ಸಂಘದ ತಾಲೂಕು ಅಧ್ಯಕ್ಷ ಕೆ.ಸಿ.ಬಸಪ್ಪ, ಮುಖಂಡರಾದ ಜಿ.ಸಿ.ಲೋಕಶ್ವರಪ್ಪ, ಎಂ.ಜಿ.ಬಸವನಗೌಡ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link