ಬೆಂಗಳೂರು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬರುವ ಜ. 17 ರಂದು ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿವರೆಗೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದನ್ನು ಕೈಬಿಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಲಹೆ ನೀಡಿದ್ದಾರೆ.
ವಿವಿಧ ಮಠಾಧೀಶರ ಸಮ್ಮುಖದಲ್ಲಿ ನಡೆದ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಶಿಕ್ಷಕರ ಸಭೆಯಲ್ಲಿ ಬೇಡಿಕೆ ಈಡೇರಿಸಿಕೊಳ್ಳಲು ಶಾಲಾ-ಕಾಲೇಜು ಬಂದ್ ಮಾಡಿ ಸತ್ಯಾಗ್ರಹ ನಡೆಸಲುದ್ದೇಶಿಸಿರುವುದು ಸರಿಯಲ್ಲ ಏನೇ ಬೇಡಿಕೆಗಳಿದ್ದರು ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಅದನ್ನು ಬಿಟ್ಟು ಶಾಲಾ-ಕಾಲೇಜು ಬಂದ್ ಮಾಡುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.
ಜನವರಿ ಮೊದಲ ವಾರದಲ್ಲಿ ಅನುದಾನ ಶಿಕ್ಷಕರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಶಿಕ್ಷಕರ ಸಭೆ ಕರೆದು ಚರ್ಚೆ ನಡೆಸುವ ಬಗ್ಗೆ ಚಿಂತನೆ ನಡೆಸಿದ್ದೇನೆ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಬಂದ್ ಮಾಡುವ ವಿಚಾರವನ್ನು ಕೈಬಿಡುವಂತೆ ಅವರು ಕಳಕಳಿಯ ಮನವಿ ಮಾಡಿದ್ದಾರೆ.
ಸಭೆಯ ದಿನಾಂಕವನ್ನು ತಿಳಿಸುವುದಾಗಿ ಹೇಳಿರುವ ಅವರು, ಎಲ್ಲರೂ ಒಟ್ಟಾಗಿ ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳೋಣ, ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್ ಮಾಡಬೇಡಿ ಎಂದು ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/09/suresh-kumar_650x400_51425405374.gif)