ದಾವಣಗೆರೆ
![](https://prajapragathi.com/wp-content/uploads/2019/08/Smartcity.gif)
ಸ್ಮಾರ್ಟ್ ಸಿಟಿ ಮತ್ತು ಜಲಸಿರಿ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬುಧವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಪರಿಶೀಲಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಶ್ರಯ ಬಡಾವಣೆಗಳಾದ ಎಸ್.ಪಿ.ಎಸ್.ನಗರ 1 ಮತ್ತು 2ನೇ ಹಂತ, ಎಸ್.ಎಂ.ಕೃಷ್ಣ ನಗರ, ರಾಜೀವ್ ಗಾಂಧಿ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿ, ಮಳೆ ನೀರು ಚರಂಡಿ ನಿರ್ಮಾಣದ ಕಾಮಗಾರಿ ಹಾಗೂ ಜಲಸಿರಿ ಯೋಜನೆಯ ಓವರ್ ಹೆಡ್ ಟ್ಯಾಂಕ್ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ, ಕಾಮಗಾರಿಗೆ ಚಾಲನೆ ನೀಡಿ ಈಗಾಗಲೇ 3-4 ತಿಂಗಳಾಗಿದ್ದು, ತ್ವರಿತಗತಿಯಲ್ಲಿ ಪೂರೈಸಬೇಕು. ತ್ವರಿತಗತಿಯ ನೆಪವೊಡ್ಡಿ ಗುಣಮಟ್ಟದಲ್ಲಿ ಕಳಪೆ ಆಗದಂತೆ ಎಚ್ಚರ ವಹಿಸಬೇಕು. ಆದಷ್ಟು ಶೀಘ್ರವೇ ಜಲಸಿರಿ ಯೋಜನೆಯ ಕಾಮಗಾರಿ ಕೂಡ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ದಿನೇಶ್ ಕೆ.ಶೆಟ್ಟಿ, ಸ್ಮಾರ್ಟ್ ಸಿಟಿ ನಿರ್ದೇಶಕ ಎಂ.ನಾಗರಾಜ್, ಕಾರ್ಯಪಾಲಕ ಅಭಿಯಂತರ ಗುರುಪಾದಯ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಧರ್, ಜಲಸಿರಿ ಯೋಜನೆಯ ಕಾರ್ಯಪಾಲಕ ಅಭಿಯಂತರ ರವಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಣಕಾರ್, ಮುಖಂಡ ಎಸ್.ಮಲ್ಲಿಕಾರ್ಜುನ, ಗುತ್ತಿಗೆದಾರ ರಾಜುರೆಡ್ಡಿ ಮತ್ತಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/08/Smartcity.gif)