ಜಗಳೂರು
ನನ್ನ ಅವಧಿಯಲ್ಲಿ ಬಂದ 20 ಕೋಟಿ ರೂ. ಹೆಚ್ಚು ಅನುದಾನ ಕಾಮಾಗಾರಿಗಳನ್ನು ಶಾಸಕ ಎಸ್.ವಿ.ರಾಮಚಂದ್ರ ಅವರು 6 ತಿಂಗಳಿನಿಂದ ಗುದ್ದಲಿ ಪೂಜೆ ನೆರವೇರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಆರೋಪಿಸಿದರು.
ಪಟ್ಟಣದ ವಿದ್ಯಾನಗರದಲ್ಲಿರುವ ಗುರುವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡಗಳ ನಿರ್ಮಾ ಣದಕ್ಕೆ 2 ಕೋಟಿ, ತಾಲೂಕಿನ ಪಲ್ಲಾಗಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 2 ಕೋಟಿ, ಮುಚ್ಚನೂರು ಗ್ರಾಮದಲ್ಲಿ ಮರಳು ಸಿದ್ದೇಶ್ವರ ದೇವಸ್ಥಾನದ ಸಿಸಿ ರಸ್ತೆ ಅಭಿವೃದ್ದಿಗೆ 40 ಲಕ್ಷ, ಚದರಗೊಳ್ಳ ಮತ್ತು ಬಿಳಿಚೋಡು ರಸ್ತೆ ಅಭಿವೃದ್ದಿಗೆ 2 ಕೋಟಿ, ಹುಚ್ಚವ್ವನಹಳ್ಳಿ ಗ್ರಾಮದ ಆಯುರ್ವೇದಿ ಆಸ್ಪತ್ರೆ ನಿರ್ಮಾಣಕ್ಕೆ 65 ಲಕ್ಷ, ತಾಲೂಕಿನ ಮಲ್ಲಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡಕ್ಕೆ 1.50 ಕೋಟಿ, ಪಟ್ಟಣದಲ್ಲಿ ಹಿಂದುಳಿದ ವರ್ಗ ಬಿಸಿಎಂ ವಸತಿ ನಿಲಯಕ್ಕೆ 3 ಕೋಟಿ, ಪಟ್ಟಣದಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಗೆ 2 ಕೋಟಿ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ತಾಲೂಕಿನ ವಿವಿಧ 20 ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ 2 ಕೋಟಿ, ಅಣಬೂರು ಗ್ರಾಮದ ಸಂತೆಮೈ ದಾನದ ಅಭಿವೃದ್ದಿಗೆ 50 ಲಕ್ಷ, ಪಲ್ಲಾಗಟ್ಟೆ ಗ್ರಾಮದಲ್ಲಿ ಸಂತೆ ಮೈದಾನ ಅಭಿವೃದ್ದಿಗೆ 50 ಲಕ್ಷ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ನನ್ನ ಅವಧಿಯನ್ನು ಅನುದಾನ ವನ್ನು ತರಲಾಗಿತ್ತು ಎಂದರು.
15 ವರ್ಷಗಳಿಂದ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ನಮ್ಮ ತಾಲೂಕಿಗೆ ಏನು ಕೊಡುಗೆಯನ್ನು ನೀಡಿದ್ದಾರೆ ತೋರಿಸಲಿ. ಬರೀ ಚುನಾವಣೆ ಬಂದಾಗ ಮಾತ್ರ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ತಾಲೂಕಿಗೆ ಬರುತ್ತಿದ್ದಾರೆ, 15 ವರ್ಷ ಸಂಸದರಾಗಿರುವ ಇವರು ಜಗಳೂರು ಮತ್ತು ಹರಪನಹಳ್ಳಿ ತಾಲೂಕನ್ನು ಕಡೆಗಣಿಸಿದ್ದಾರೆ ಎಂದವರು ಆರೋಪಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ.ಪಾ ಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ, ಪಲ್ಲಾಗಟ್ಟೆ ಶೇಖರಪ್ಪ, ನಾಯಕ ಸಮಾಜದ ಮಾಜಿ ಕಾರ್ಯದರ್ಶಿ ಲೋಕೇಶ್, ಮಾಜಿ ಪಟ್ಟಣ ಪಂಚಾಯ್ತಿ ಸದಸ್ಯ ಇಕ್ಬಾಲ್, ಮುಖಂಡ ಜಯ್ಯಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
